ದಸರಾ2023:ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ…ಸಚಿವ ಹೆಚ್.ಕೆ.ಪಾಟೀಲ್ ರಿಂದ ಉದ್ಘಾಟನೆ…

ಮೈಸೂರು,ಅ20,Tv10 ಕನ್ನಡ

ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೇ ಕಾರಣ ಎಂದು
ಮೈಸೂರಿನಲ್ಲಿ ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ
ದಸರಾ ಪ್ರಯುಕ್ತ ಪಾರಂಪರಿಕ
ಟಾಂಗಾ ಸವಾರಿಯನ್ನ ಜಗನ್ಮೋಹನ ಅರಮನೆಯಲ್ಲಿ ಉದ್ಘಾಟಿಸಿದ ಸಚಿವ ಹೆಚ್.ಕೆ ಪಾಟೀಲ್ ನಂತರ ಮಾತನಾಡಿದರು.
ಟಾಂಗಾದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಹೆಚ್.ಕೆ ಪಾಟೀಲ್ ಸವಾರಿ ಮಾಡಿದರು.
ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಸವಾರಿಯ ಕಾರ್ಯಕ್ರಮ ಇದಾಗಿದೆ.
ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ.
ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ.
ಎಲ್ಲಾ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೆ ಮಾಡಲು ಆಗಲ್ಲ.
ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ.
ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ.
ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅಮೇರಿಕಾದ ಅನಿವಾಸಿ ಭಾರತಿಯರೊಡನೆ ಆನ್ ಲೈನ್ ಮೂಲಕ (ಜೂಮ್ ಮಿಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂದ ಚರ್ಚಿಸಿದ್ದೇನೆ.
ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *