ದಸರಾ2023:ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ…ಸಚಿವ ಹೆಚ್.ಕೆ.ಪಾಟೀಲ್ ರಿಂದ ಉದ್ಘಾಟನೆ…

ಮೈಸೂರು,ಅ20,Tv10 ಕನ್ನಡ

ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೇ ಕಾರಣ ಎಂದು
ಮೈಸೂರಿನಲ್ಲಿ ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ
ದಸರಾ ಪ್ರಯುಕ್ತ ಪಾರಂಪರಿಕ
ಟಾಂಗಾ ಸವಾರಿಯನ್ನ ಜಗನ್ಮೋಹನ ಅರಮನೆಯಲ್ಲಿ ಉದ್ಘಾಟಿಸಿದ ಸಚಿವ ಹೆಚ್.ಕೆ ಪಾಟೀಲ್ ನಂತರ ಮಾತನಾಡಿದರು.
ಟಾಂಗಾದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಹೆಚ್.ಕೆ ಪಾಟೀಲ್ ಸವಾರಿ ಮಾಡಿದರು.
ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಸವಾರಿಯ ಕಾರ್ಯಕ್ರಮ ಇದಾಗಿದೆ.
ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ.
ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ.
ಎಲ್ಲಾ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೆ ಮಾಡಲು ಆಗಲ್ಲ.
ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ.
ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ.
ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅಮೇರಿಕಾದ ಅನಿವಾಸಿ ಭಾರತಿಯರೊಡನೆ ಆನ್ ಲೈನ್ ಮೂಲಕ (ಜೂಮ್ ಮಿಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂದ ಚರ್ಚಿಸಿದ್ದೇನೆ.
ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *