ದಂಪತಿ ನಡುವೆ ವಿರಸ…ನಾಲೆಗೆ ಹಾರಿದ ಪತ್ನಿ…ರಕ್ಷಿಸಲು ಹಾರಿದ ಪತಿ…ಪತಿ ಸಾವು…ಪತ್ನಿಗಾಗಿ ಶೋಧ…

ನಂಜನಗೂಡು,ಅ20,Tv10 ಕನ್ನಡ

ದಂಪತಿ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಪತ್ನಿ ನಾಲೆಗೆ ಹಾರಿದ ಪತಿಯನ್ನ ರಕ್ಷಿಸಲು ಹೋದ ಪತಿ ನೀರುಪಾಲಾದ ಘಟನೆ ನಂಜನಗೂಡಿನ ಹರತಲೆ ಗ್ರಾಮದಲ್ಲಿ ನಡೆದಿದೆ.ಪತಿ ಮುಂದೆಯೇ ನೀರಿಗೆ ಹಾರಿದ ಪತ್ನಿಯ ಶೋಧನಾ ಕಾರ್ಯ ಮುಂದುವರೆದಿದೆ.

ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದ ಶಂಕರ್ ಮೃತ ದುರ್ದೈವಿ.ಪತ್ನಿ ಬೇಬಿಗಾಗಿ ಹುಡುಕಾಟ ಮುಂದುವರೆದಿದೆ.
ನಂಜನಗೂಡು ಪಟ್ಟಣದ ಅಪೋಲೋ ಆಸ್ಪತ್ರೆಯಲ್ಲಿ ರಿಸೆಪ್ಶನ್ ಆಗಿರುವ ಬೇಬಿಯನ್ನ
ಲಗೇಜ್ ಆಟೋ ನಡೆಸುತ್ತಿರುವ ಶಂಕರ್ ವಿವಾಹವಾಗಿದ್ದರು.ದಂಪತಿಗೆ 5 ವರ್ಷದ ಹೆಣ್ಣು ಮಗು ಇದೆ.
ನೆನ್ನೆ ಸುಮಾರು ಒಂಬತ್ತು ಗಂಟೆಯ ಸಮಯದಲ್ಲಿ ಹುಸ್ಕೂರು ಗ್ರಾಮದಿಂದ ನಂಜನಗೂಡಿಗೆ ಬರುತ್ತಿರುವ ಸಂದರ್ಭದಲ್ಲಿ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಆಟೋದಿಂದ ಇಳಿದ ಬೇಬಿ ಹರತಲೆ ಗ್ರಾಮದ ಕಬಿನಿ ಬಲದಂಡೆಗೆ ಹಾರಿದ್ದಾರೆ.ಪತ್ನಿಯನ್ನ ರಕ್ಷಿಸಲು ಶಂಕರ್ ಸಹ ನಾಲೆಗೆ ಹಾರಿದ್ದಾರೆ. ಪತಿ ಶಂಕರ್ ಮೃತಪಟ್ಟಿದ್ದು ಮೃತದೇಹ ಪತ್ತೆಯಾಗಿದೆ.ಪತ್ನಿ ಬೇಬಿಗಾಗಿ ನುರಿತ ಈಜುಗಾರರು ಹುಡುಕಾಟ ನಡೆಸುತ್ತಿದ್ದಾರೆ.
ನಂಜನಗೂಡು ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ನಂಜನಗೂಡು ಪಟ್ಟಣದ ವೃತ್ತ ನಿರೀಕ್ಷಕ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲ ನಡೆಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *