ದಂಪತಿ ನಡುವೆ ವಿರಸ…ನಾಲೆಗೆ ಹಾರಿದ ಪತ್ನಿ…ರಕ್ಷಿಸಲು ಹಾರಿದ ಪತಿ…ಪತಿ ಸಾವು…ಪತ್ನಿಗಾಗಿ ಶೋಧ…

ನಂಜನಗೂಡು,ಅ20,Tv10 ಕನ್ನಡ

ದಂಪತಿ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಪತ್ನಿ ನಾಲೆಗೆ ಹಾರಿದ ಪತಿಯನ್ನ ರಕ್ಷಿಸಲು ಹೋದ ಪತಿ ನೀರುಪಾಲಾದ ಘಟನೆ ನಂಜನಗೂಡಿನ ಹರತಲೆ ಗ್ರಾಮದಲ್ಲಿ ನಡೆದಿದೆ.ಪತಿ ಮುಂದೆಯೇ ನೀರಿಗೆ ಹಾರಿದ ಪತ್ನಿಯ ಶೋಧನಾ ಕಾರ್ಯ ಮುಂದುವರೆದಿದೆ.

ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದ ಶಂಕರ್ ಮೃತ ದುರ್ದೈವಿ.ಪತ್ನಿ ಬೇಬಿಗಾಗಿ ಹುಡುಕಾಟ ಮುಂದುವರೆದಿದೆ.
ನಂಜನಗೂಡು ಪಟ್ಟಣದ ಅಪೋಲೋ ಆಸ್ಪತ್ರೆಯಲ್ಲಿ ರಿಸೆಪ್ಶನ್ ಆಗಿರುವ ಬೇಬಿಯನ್ನ
ಲಗೇಜ್ ಆಟೋ ನಡೆಸುತ್ತಿರುವ ಶಂಕರ್ ವಿವಾಹವಾಗಿದ್ದರು.ದಂಪತಿಗೆ 5 ವರ್ಷದ ಹೆಣ್ಣು ಮಗು ಇದೆ.
ನೆನ್ನೆ ಸುಮಾರು ಒಂಬತ್ತು ಗಂಟೆಯ ಸಮಯದಲ್ಲಿ ಹುಸ್ಕೂರು ಗ್ರಾಮದಿಂದ ನಂಜನಗೂಡಿಗೆ ಬರುತ್ತಿರುವ ಸಂದರ್ಭದಲ್ಲಿ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಆಟೋದಿಂದ ಇಳಿದ ಬೇಬಿ ಹರತಲೆ ಗ್ರಾಮದ ಕಬಿನಿ ಬಲದಂಡೆಗೆ ಹಾರಿದ್ದಾರೆ.ಪತ್ನಿಯನ್ನ ರಕ್ಷಿಸಲು ಶಂಕರ್ ಸಹ ನಾಲೆಗೆ ಹಾರಿದ್ದಾರೆ. ಪತಿ ಶಂಕರ್ ಮೃತಪಟ್ಟಿದ್ದು ಮೃತದೇಹ ಪತ್ತೆಯಾಗಿದೆ.ಪತ್ನಿ ಬೇಬಿಗಾಗಿ ನುರಿತ ಈಜುಗಾರರು ಹುಡುಕಾಟ ನಡೆಸುತ್ತಿದ್ದಾರೆ.
ನಂಜನಗೂಡು ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ನಂಜನಗೂಡು ಪಟ್ಟಣದ ವೃತ್ತ ನಿರೀಕ್ಷಕ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲ ನಡೆಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *