ದಂಪತಿ ನಡುವೆ ವಿರಸ…ನಾಲೆಗೆ ಹಾರಿದ ಪತ್ನಿ…ರಕ್ಷಿಸಲು ಹಾರಿದ ಪತಿ…ಪತಿ ಸಾವು…ಪತ್ನಿಗಾಗಿ ಶೋಧ…

ನಂಜನಗೂಡು,ಅ20,Tv10 ಕನ್ನಡ

ದಂಪತಿ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಪತ್ನಿ ನಾಲೆಗೆ ಹಾರಿದ ಪತಿಯನ್ನ ರಕ್ಷಿಸಲು ಹೋದ ಪತಿ ನೀರುಪಾಲಾದ ಘಟನೆ ನಂಜನಗೂಡಿನ ಹರತಲೆ ಗ್ರಾಮದಲ್ಲಿ ನಡೆದಿದೆ.ಪತಿ ಮುಂದೆಯೇ ನೀರಿಗೆ ಹಾರಿದ ಪತ್ನಿಯ ಶೋಧನಾ ಕಾರ್ಯ ಮುಂದುವರೆದಿದೆ.

ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದ ಶಂಕರ್ ಮೃತ ದುರ್ದೈವಿ.ಪತ್ನಿ ಬೇಬಿಗಾಗಿ ಹುಡುಕಾಟ ಮುಂದುವರೆದಿದೆ.
ನಂಜನಗೂಡು ಪಟ್ಟಣದ ಅಪೋಲೋ ಆಸ್ಪತ್ರೆಯಲ್ಲಿ ರಿಸೆಪ್ಶನ್ ಆಗಿರುವ ಬೇಬಿಯನ್ನ
ಲಗೇಜ್ ಆಟೋ ನಡೆಸುತ್ತಿರುವ ಶಂಕರ್ ವಿವಾಹವಾಗಿದ್ದರು.ದಂಪತಿಗೆ 5 ವರ್ಷದ ಹೆಣ್ಣು ಮಗು ಇದೆ.
ನೆನ್ನೆ ಸುಮಾರು ಒಂಬತ್ತು ಗಂಟೆಯ ಸಮಯದಲ್ಲಿ ಹುಸ್ಕೂರು ಗ್ರಾಮದಿಂದ ನಂಜನಗೂಡಿಗೆ ಬರುತ್ತಿರುವ ಸಂದರ್ಭದಲ್ಲಿ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಆಟೋದಿಂದ ಇಳಿದ ಬೇಬಿ ಹರತಲೆ ಗ್ರಾಮದ ಕಬಿನಿ ಬಲದಂಡೆಗೆ ಹಾರಿದ್ದಾರೆ.ಪತ್ನಿಯನ್ನ ರಕ್ಷಿಸಲು ಶಂಕರ್ ಸಹ ನಾಲೆಗೆ ಹಾರಿದ್ದಾರೆ. ಪತಿ ಶಂಕರ್ ಮೃತಪಟ್ಟಿದ್ದು ಮೃತದೇಹ ಪತ್ತೆಯಾಗಿದೆ.ಪತ್ನಿ ಬೇಬಿಗಾಗಿ ನುರಿತ ಈಜುಗಾರರು ಹುಡುಕಾಟ ನಡೆಸುತ್ತಿದ್ದಾರೆ.
ನಂಜನಗೂಡು ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ನಂಜನಗೂಡು ಪಟ್ಟಣದ ವೃತ್ತ ನಿರೀಕ್ಷಕ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲ ನಡೆಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *