ಬಸವೇಶ್ವರ ವೃತ್ತದಲ್ಲಿ ತಲೆ ಎತ್ತಲಿರುವ ಮಧ್ಯದ ಅಂಗಡಿ…ಸ್ಥಳೀಯರ ಭಾರಿ ವಿರೋಧ…

ನಂಜನಗೂಡು,ಅ20,Tv10 ಕನ್ನಡ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತ ಮತ್ತು ಕಸುವಿನಹಳ್ಳಿ ಗ್ರಾಮದಲ್ಲಿ ತಲೆ ಎತ್ತುತ್ತಿರುವ ಮಧ್ಯದ ಅಂಗಡಿಗೆ ಭಾರಿ ವಿರೋಧ ವ್ಯಕ್ತವಾಗಿದೆ.
ವೀರಶೈವ ಲಿಂಗಾಯತ ಸಂಘಟನೆ ಮಹಿಳೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸುತ್ತೂರು ದೇಶೀಕೇಂದ್ರ ಸ್ವಾಮೀಜಿ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಮತ್ತು ನಂಜನಗೂಡಿನ ಶಾಸಕ ದರ್ಶನ್ ದ್ರುವ ನಾರಾಯಣ್ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ದೇವಿರಮ್ಮನಹಳ್ಳಿ ಸಮೀಪದ ವಿಶ್ವಗುರು ಶ್ರೀ ಬಸವೇಶ್ವರ ವೃತ್ತದ ಬಳಿ ಹಾಗೂ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನೂತನ ಮದ್ಯದ ಅಂಗಡಿ ಸ್ಥಾಪನೆಗೆ ಸಿದ್ದತೆ ನಡೆದಿದೆ.ಇದನ್ನ ವಿರೋಧಿಸಿ ನಂಜನಗೂಡಿನ ವೀರಶೈವ ಸಂಘಟಕರು ಸೇರಿದಂತೆ ಪ್ರಗತಿಪರರು ಸಾಕಷ್ಟು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ಬಸವೇಶ್ವರ ವೃತ್ತದಲ್ಲಿ 101 ಲಿಂಗ ಸ್ಥಾಪನೆಯ ಪ್ರಸಿದ್ಧ ಮಠ ಜೆಎಸ್ಎಸ್ ಕಾಲೇಜು ಇದೆ. ಅತಿ ಹೆಚ್ಚು ಮಹಿಳೆಯರ ಜನಸಂದಣಿಯ ಪ್ರದೇಶವಾಗಿದೆ. ಕಸುವಿನಹಳ್ಳಿ ಗ್ರಾಮದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿ ನೂತನ ಮದ್ಯದ ಅಂಗಡಿ ಸ್ಥಾಪನೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಮಧ್ಯದ ಅಂಗಡಿಗೆ ಪರವಾಗಿ ನೀಡಿದ್ದಾರೆ.
ಸಾರ್ವಜನಿಕರ ವಿರೋಧ ಇದ್ದರೂ ಮಧ್ಯದ ಅಂಗಡಿ ಓಪನ್ ಗೆ ಸಜ್ಜಾಗುತ್ತಿದೆ. ಯಾವುದೇ ಕಾರಣಕ್ಕೂ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತ ಮತ್ತು ಕಸುವಿನಲ್ಲಿ ಗ್ರಾಮದಲ್ಲಿ ಮಧ್ಯದ ಅಂಗಡಿ ಸ್ಥಾಪನೆ ಮಾಡಬಾರದು ಎಂದು ಸಾಕಷ್ಟು ಮಹಿಳೆಯರು ಮತ್ತು ಸಂಘಟಕರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *