ದಸರಾ ಕ್ರೀಡೆ ಹಾಗೂ ಸಿಎಂ ಕಪ್ ವಿಜೇತರಿಗೆ ಬಹುಮಾನ ವಿತರಣೆ…

ದಸರಾ ಕ್ರೀಡೆ ಹಾಗೂ ಸಿಎಂ ಕಪ್ ವಿಜೇತರಿಗೆ ಬಹುಮಾನ ವಿತರಣೆ…

ಮೈಸೂರು,ಅ21,Tv10 ಕನ್ನಡ

ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಸರಾ ಕ್ರೀಡಾ ಉಪಸಮಿತಿ ವತಿಯಿಂದ ಶನಿವಾರ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ಮತ್ತು ಸಿಎಂ ಕಪ್-2023 ಕ್ರೀಡೆಯ ವಿಜೇತರಿಗೆ ಬಹುಮಾನ ವಿತರಿಸಿ ಸಚಿವರು ಮಾತನಾಡಿದರು.

ಕ್ರೀಡೆಯು ಮನುಷ್ಯನ ಭಾವನೆಗಳನ್ನು ಕ್ಷಣಾರ್ಧದಲ್ಲಿ ಬದಲಿಸುವ ಶಕ್ತಿ ಹೊಂದಿದೆ. ಬಹುಮುಖ್ಯವಾಗಿ ಕ್ರೀಡೆಗೆ ಕಠಿಣವಾದ ಪರಿಶ್ರಮ ಅಗತ್ಯ. ಅದಕ್ಕೆ ಉತ್ತೇಜನ ಮತ್ತು ಪ್ರೋತ್ಸಾಹ ಹಾಗೂ ಅಗತ್ಯ ಸವಲತ್ತುಗಳನ್ನು ನೀಡಿದಾಗ ಉತ್ತಮ ಕ್ರೀಡಾಪಟುಗಳು ರೂಪುಗೊಳ್ಳುತ್ತಾರೆ. ಈ ಎಲ್ಲಾ ಸೌಕರ್ಯವನ್ನು ಸರ್ಕಾರ ಒದಗಿಸಿಕೊಡಲಿದೆ ಎಂದು ಭರವಸೆ ನೀಡಿದರು.

ಮೈಸೂರು ದಸರಾ ಮಹೋತ್ಸವಲ್ಲಿ ಪ್ರಮುಖವಾಗಿ ಕಳೆಗಟ್ಟುವ ವೇದಿಕೆ ದಸರಾ ಕ್ರೀಡಾಕೂಟವಾಗಿದೆ. ಈ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಸರ್ಕಾರ ಅಭಿನಂದಿಸುತ್ತದೆ. ಈ ಎಲ್ಲರೂ ಕೂಡ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸೌಹಾರ್ದತೆ, ಅಖಂಡತೆ ಮತ್ತು ಬಹುತ್ವವನ್ನು ರಕ್ಷಣೆ ಮಾಡುವುದು ನಿಮ್ಮ ಜವಬ್ದಾರಿ ಎಂದು ತಿಳಿಸಿದರು.

ದಸರಾ ಕ್ರೀಡಾಕೂಟದಲ್ಲಿ ಹತ್ತು ಸಾವಿರ ಕ್ರೀಡಾಪಟುಗಳು ಭಾಗವಹಿಸಿ, ಕ್ರೀಡಾಂಗದಲ್ಲಿ ಅತ್ಯುತ್ತಮವಾದ ಪ್ರದರ್ಶನ ನೀಡಿದ್ದಾರೆ. ಸೋಲು, ಗೆಲುವಿನ ಲೆಕ್ಕಚಾರ ಹಾಕದೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಸಾಧನೆ ಮಾಡಿದಂತಹ ಸಾಧಕರ ಗುರಿ ನಿಮ್ಮದಾಗಬೇಕು. ಸೋಲೇ ಗೆಲುವಿನ ಸೋಪಾನ ಎಂದು ಭಾವಿಸಿ ಮರಳಿ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಶಾಸಕ ತನ್ವೀರ್ ಸೇಠ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ಒಲಂಪಿಕ್ ಸಂಸ್ಥೆಯ ಕಾರ್ಯದರ್ಶಿ ಆನಂತ್ ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎನ್.ಶಶಿಕುಮಾರ್, ಉಪಸಮಿತಿ ಅಧ್ಯಕ್ಷ ಶಿವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *