ದಸರಾ 2023:ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ…

ದಸರಾ 2023:ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ…

ಮೈಸೂರು,ಅ2,Tv10 ಕನ್ನಡ

ದಸರಾ ಮಹೋತ್ಸವದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರಲ್ಲಿ ಹಾಲು ಕರೆಯುವ ಸ್ಪರ್ಧೆಯನ್ನ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಗವಹಿಸಿ ವಿಜೇತರಾದವರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ರವರು ಇಂದು ಬಹುಮಾನ ವಿತರಿಸಿದರು.ನಂತರ ಮಾತನಾಡಿ
ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಇಂಥ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಮುಖ್ಯ. ಇದೇ ತರಹ ಮುಂದಿನ ದಿನಗಳಲ್ಲಿ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ ಸ್ಪರ್ಧಾತ್ಮಕವಾಗಿ ಭಾಗವಹಿಸುವುದಕ್ಕೆ ಮನಸ್ಸು ಮಾಡಿ . ಸರ್ಕಾರವು ಹೈನುಗಾರಿಕೆ ಮತ್ತು ಕೃಷಿ ಸಂಬಂಧಪಟ್ಟಂತೆ ಅನೇಕ ಯೋಜನೆಗಳನ್ನು ರೂಪಿಸಿದ್ದು ಇದರ ಉಪಯೋಗ ಪಡೆದುಕೊಳ್ಳಿ. ಪಶುಸಂಗೋಪನೆಯನ್ನು ಉತ್ತೇಜಿಸಲು ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು . ನಗದು ಬಹುಮಾನ ಬಹಳ ಕಡಿಮೆಯಾಗಿದೆ, ಮುಂದಿನ ಬಾರಿ ನಗದು ಬಹುಮಾನವನ್ನು ಹೆಚ್ಚು ಮಾಡಿ ಸ್ಪರ್ಧೆಗೆ ಭಾಗವಹಿಸುವವರನ್ನು ಉತ್ತೇಜಿಸಲಾಗುತ್ತದೆ ಎಂದರು.

ಸ್ಪರ್ಧೆಯಲ್ಲಿ ಬೆಂಗಳೂರು ಕಾಮಾಕ್ಷಿಪಾಳ್ಯದ ಯೋಗೇಶ್ ರವರು 46 kg 600 ಗ್ರಾಂ ಹಾಲನ್ನು ಕರೆಯುವುದರ ಮೂಲಕ 50,000 ನಗದು ಆಕರ್ಷಕ ಟ್ರೋಪಿಯನ್ನು ಪಡೆದು ಪ್ರಥಮ ಸ್ಥಾನ ಗಳಿಸಿದರು. ಮಂಡ್ಯ ಜಿಲ್ಲೆಯ ದುದ್ದ ಗ್ರಾಮದ ಕೆ ಎಸ್ ಗೋಪಾಲಕೃಷ್ಣಯ್ಯ ರವರು 36 ಕೆಜಿ ಹಾಲನ್ನು ಕರೆಯುವುದರ ಮೂಲಕ 40,000 ನಗದು ಹಾಗೂ ಆಕರ್ಷಕ ಟ್ರೋಪಿಯನ್ನು ಪಡೆದು ದ್ವಿತೀಯ ಸ್ಥಾನ ಗಳಿಸಿದರು. ಮೈಸೂರಿನ ದೇವರಾಜ್ ಮೊಹಲ್ಲದ ಹಾರೋ ವಿನೋದ್ ರವರು 34 kg 160 ಗ್ರಾಂ ಹಾಲನ್ನು ಕರೆಯುವುದರ ಮೂಲಕ 30.000 ನಗದನ್ನು ಗಳಿಸುವ ಮೂಲಕ ತೃತೀಯ ಸ್ಥಾನವನ್ನು ಪಡೆದರು. ಆನೇಕಲ್ ತಾಲೂಕಿನ ಪಿ ಶ್ರೀನಿವಾಸ್ 34 ಕೆಜಿ 70 ಗ್ರಾಂ ಹಾಲನ್ನು ಕರೆಯುವುದರ ಮೂಲಕ 10,000 ನಗದು ಹಾಗೂ ಆಕರ್ಷಕ ಟ್ರೋಪಿಯನ್ನು ಗಳಿಸಿ ನಾಲ್ಕನೇ ಸ್ಥಾನ ಪಡೆದರು ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಸಮಾಧಾನಕರ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ನಾಗರಾಜು, ಹಾಗೂ ರೈತ ದಸರಾ ಉಪ ಸಮಿತಿ ಸದಸ್ಯರು ಹಾಜರಿದ್ದರು…

Spread the love

Related post

ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ…

ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್…

ಮೈಸೂರು,ಮಾ14,Tv10 ಕನ್ನಡ ಮೈಸೂರು ತಾಲೂಕು ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹನಗಳ್ಳಿಯ ತೋಟದ ಮನೆಯಲ್ಲಿ ರೌಡಿ ಶೀಟರ್ ಬರ್ಭರ ಹತ್ಯೆಯಾಗಿದೆ.ದೊರೆಸ್ವಾಮಿ.ಆ.ಸೂರ್ಯ ಮೃತ ರೌಡಿ ಶೀಟರ್.ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಾರಕಾಸ್ತ್ರದಿಂದ…
ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಂಡು ಇಂದಿಗೆ ಒಂದು ವರ್ಷ…ಜನರ ಪ್ರೀತಿ ವಿಶ್ವಾಸಕ್ಕೆ ಫಿದಾ…

ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಂಡು ಇಂದಿಗೆ ಒಂದು ವರ್ಷ…ಜನರ ಪ್ರೀತಿ ವಿಶ್ವಾಸಕ್ಕೆ…

ಮೈಸೂರು,ಮಾ14,Tv10 ಕನ್ನಡ ಸಂಸದ ಸ್ಥಾನದ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತುಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ, ಪ್ರೋತ್ಸಾಹ ಇವತ್ತಿಗೂ ಹಾಗೇ ಇದೆ ಎಂದುಸಾಮಾಜಿಕ ಜಾಲತಾಣದಲ್ಲಿ ಮಾಜಿ‌ ಸಂಸದ…
ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಮೈಸೂರು,ಮಾ13,Tv10 ಕನ್ನಡ ಟ್ರೇಡಿಂಗ್ ನಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 17 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ಕುಂಬಾರಕೊಪ್ಪಲಿನ ನಿವಾಸಿ ವಿನಯ್ ಕುಮಾರ್ ಎಂಬುವರೇ ಹಣ ಕಳೆದುಕೊಂಡವರು.ಇನ್ಸ್ ಸ್ಟಾಗ್ರಾಂ…

Leave a Reply

Your email address will not be published. Required fields are marked *