ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ಮೈಸೂರು,ಅ23,Tv10 ಕನ್ನಡ

ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ಯಶಸ್ವಿಗಾಗಿ ಹಾಗೂ ಮುನ್ನೆಚ್ಚರಿಕೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಲಕ್ಷಾಂತರ ಮಂದಿ ಸೇರುವ ಹಿನ್ನಲೆ ಜಂಬೂಸವಾರಿಗೆ ಖಾಕಿ ಸರ್ಪಗಾವಲು ಏರ್ಪಡಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
6 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಈ ಬಾರಿ ಜಂಬೂಸವಾರಿಗಾಗಿ ನಿಯೋಜಿಸಲಾಗಿದೆ. ಒಬ್ಬರು ಡಿ ಐ ಜಿ, ಎಂಟು ಮಂದಿ ಎಸ್ ಪಿ ಗಳು, 10 ಅಡಿಷನಲ್ ಎಸ್ಪಿ ಗಳು, ಡಿವೈಎಸ್ಪಿ, ಇನ್ಸ್‌ಪೆಕ್ಟರ್ ಸೇರಿ ಹೊರಗಿನಿಂದ 4,500 ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.
ಈ ಬಾರಿ ಶಕ್ತಿ ಯೋಜನೆಯಿಂದಾಗಿ ‌‌ಬಸ್ ಗಳಲ್ಲಿ ಉಚಿತ ಪ್ರಯಾಣ ಇರುವುದರಿಂದ ಅತಿ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ.ಹೀಗಾಗಿ ಹೆಚ್ಚು ಭದ್ರತೆ ಒದಗಿಸಲಾಗಿದೆ.
ನಗರದಾದ್ಯಂತ ಸಣ್ಣ,ಸಣ್ಣ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ನಗರದಲ್ಲಿರುವ ಎಲ್ಲಾ ಮಾಲ್ ಗಳು, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧಡೆ ಭದ್ರತೆ ಹೆಚ್ಚಿಸಲಾಗಿದೆ.
ನಗರದ ಹೋಟೆಲುಗಳಲ್ಲಿ ತಂಗಿರುವ ಪ್ರವಾಸಿಗರ ಬಗ್ಗೆ ಹೆಚ್ಚು ನಿಗಾವಹಿಸಲಾಗಿದೆ. ಸಿ ಸಿ ಕ್ಯಾಮೆರಾಗಳ ಕಣ್ಗಾವಲು ಹಾಕಲಾಗಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *