ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಮೈಸೂರು,ಅ26,Tv10 ಕನ್ನಡ

ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿಕಾಲೋನಿಯಲ್ಲಿ ನಡೆದಿದೆ.ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ.ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಆಸ್ಪತ್ರೆಗೆ ದಾಖಲಾಗಿದ್ದಾನೆ.ಬೀಡಿ ಕಾಲೋನಿಯ ಬಳಿ ಇರುವ ಟೀ ಅಂಗಡಿಯಲ್ಲಿ ಕುಳಿತಿದ್ದ ಆಸಿಫ್ ಜೊತೆ ಹಣಕಾಸಿನ ವಿಚಾರದಲ್ಲಿ ಸಲೀಂ ಪಾಷ ಕ್ಯಾತೆ ತೆಗೆದಿದ್ದಾನೆ.ಇಬ್ಬರ ನಡುವೆ ಹೊಡೆದಾಟ ಶುರುವಾಗಿದೆ.ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿದಾಗ ಆಸಿಫ್ ತಲೆಗೆ ನೀಲಗಿರಿಮರದ ಪಟ್ಟಿಯಿಂದ ತಲೆಗೆ ಹೊಡೆದಿದ್ದಾನೆ.ರಕ್ತದ ಮಡುವಿನಲ್ಲಿ ಬಿದ್ದ ಆಸಿಫ್ ನ ಕೆ.ಆರ್.ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.ಹೊಡೆದಾಟದಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಗೂ ಸಹ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿಗಖಾದ ಮುತ್ತುರಾಜ್ ಹಾಗೂ ಜಾಹ್ನವಿ,ಎಸಿಪಿ ಶಾಂತಮಲ್ಲಪ್ಪ,ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜು ರವರು ಭೇಟಿ ನೀಡಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *