ಚಾಮುಂಡಿಬೆಟ್ಟದಲ್ಲಿ ವೈಭವದ ರಥೋತ್ಸವ…ಕಣ್ತುಂಬಿಕೊಂಡ ಭಕ್ತಸಾಗರ…

ಮೈಸೂರು,ಅ 26,Tv10 ಕನ್ನಡ

ದಸರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಬೆಳಿಗ್ಗೆ 7.50 ರಿಂದ 8.10ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಯ ರಥೋತ್ಸವ ನಡೆಯಿತು.
ಚಾಮುಂಡೇಶ್ವರಿ ದೇವಿಯ ರಥೋತ್ಸವ ದೇವಾಲಯದ ಸುತ್ತಲೂ ಸಾಗಿ ಬಂದಿತು.
ದೇವಿಯ ರಥೋತ್ಸವಕ್ಕೆ ರಾಜವಂಶಸ್ಥರದ ಪ್ರಮೋದ ದೇವಿ ಒಡೆಯರ್, ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕ ಕುಮಾರಿ ಒಡೆಯರ್ ರಥೋತ್ಸವಕ್ಕೆ ಚಾಲನೆ ನೀಡಿದರು.
ಮಂಗಳವಾದ್ಯದೊಂದಿಗೆ ತಾಯಿಯ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಇದೇ ಸಂದರ್ಭದಲ್ಲಿ 21 ಬಾರಿ ಸಿಡಿಮುತ್ತು ಸಿಡಿಸಿ ದೇವಿಗೆ ಗೌರವ ಸಮರ್ಪಿಸಲಾಯಿತು.
ಚಾಮುಂಡಿಬೆಟ್ಟದಲ್ಲಿ ನಡೆದ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದರು. ಮುಂಜಾನೆಯೇ ದೇವಾಲಯದಲ್ಲಿ ತಾಯಿಗೆ ವಿವಿಧ ಅಭಿಷೇಕ ವಿಶೇಷ ಪೂಜೆ ಸಲ್ಲಿಸಲಾಯಿತು.
ನಾಡ ಅಧಿದೇವತೆಗೆ
ಹಸಿರು ಬಣ್ಣದ ಸೀರೆಯುಡಿಸಿ ಆಭರಣಗಳನ್ನು ಧರಿಸಲಾಗಿತ್ತು.
ಮೊದಲಿಗೆ ರಥದಲ್ಲಿ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್,ತ್ರಿಷಿಕಾ ಕುಮಾರಿ ಒಡೆಯರ್,ಶಾಸಕ ಜಿಟಿ ದೇವೇಗೌಡ ಅವರು ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು.
ಅರಮನೆ ಪೊಲೀಸ್ ತಂಡದಿಂದ ಸಂಗೀತ ವಾದ್ಯ ಮೊಳಗಿತು.
ದೇವಸ್ಥಾನದ ಬಳಿ ಸಿಂಗಾರಗೊಂಡು ನಿಂತಿದ್ದ ರಥವನ್ನು ಭಕ್ತರು ರಥದ ಹಗ್ಗ ಹಿಡಿದು ಎಳೆದು ಪುನೀತರಾದರು.ಇನ್ನೂ ಕೆಲವರು ಹಗ್ಗ ಮುಟ್ಟಿ ನಮಸ್ಕರಿಸಿ, ಚಾಮುಂಡೇಶ್ವರಿ ಗೆ ಜೈ ಎಂದು ಘೋಷಣೆ ಕೂಗಿದರು.

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *