ಚಾಮುಂಡಿಬೆಟ್ಟದಲ್ಲಿ ವೈಭವದ ರಥೋತ್ಸವ…ಕಣ್ತುಂಬಿಕೊಂಡ ಭಕ್ತಸಾಗರ…

ಮೈಸೂರು,ಅ 26,Tv10 ಕನ್ನಡ

ದಸರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಬೆಳಿಗ್ಗೆ 7.50 ರಿಂದ 8.10ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಯ ರಥೋತ್ಸವ ನಡೆಯಿತು.
ಚಾಮುಂಡೇಶ್ವರಿ ದೇವಿಯ ರಥೋತ್ಸವ ದೇವಾಲಯದ ಸುತ್ತಲೂ ಸಾಗಿ ಬಂದಿತು.
ದೇವಿಯ ರಥೋತ್ಸವಕ್ಕೆ ರಾಜವಂಶಸ್ಥರದ ಪ್ರಮೋದ ದೇವಿ ಒಡೆಯರ್, ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕ ಕುಮಾರಿ ಒಡೆಯರ್ ರಥೋತ್ಸವಕ್ಕೆ ಚಾಲನೆ ನೀಡಿದರು.
ಮಂಗಳವಾದ್ಯದೊಂದಿಗೆ ತಾಯಿಯ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಇದೇ ಸಂದರ್ಭದಲ್ಲಿ 21 ಬಾರಿ ಸಿಡಿಮುತ್ತು ಸಿಡಿಸಿ ದೇವಿಗೆ ಗೌರವ ಸಮರ್ಪಿಸಲಾಯಿತು.
ಚಾಮುಂಡಿಬೆಟ್ಟದಲ್ಲಿ ನಡೆದ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದರು. ಮುಂಜಾನೆಯೇ ದೇವಾಲಯದಲ್ಲಿ ತಾಯಿಗೆ ವಿವಿಧ ಅಭಿಷೇಕ ವಿಶೇಷ ಪೂಜೆ ಸಲ್ಲಿಸಲಾಯಿತು.
ನಾಡ ಅಧಿದೇವತೆಗೆ
ಹಸಿರು ಬಣ್ಣದ ಸೀರೆಯುಡಿಸಿ ಆಭರಣಗಳನ್ನು ಧರಿಸಲಾಗಿತ್ತು.
ಮೊದಲಿಗೆ ರಥದಲ್ಲಿ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್,ತ್ರಿಷಿಕಾ ಕುಮಾರಿ ಒಡೆಯರ್,ಶಾಸಕ ಜಿಟಿ ದೇವೇಗೌಡ ಅವರು ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು.
ಅರಮನೆ ಪೊಲೀಸ್ ತಂಡದಿಂದ ಸಂಗೀತ ವಾದ್ಯ ಮೊಳಗಿತು.
ದೇವಸ್ಥಾನದ ಬಳಿ ಸಿಂಗಾರಗೊಂಡು ನಿಂತಿದ್ದ ರಥವನ್ನು ಭಕ್ತರು ರಥದ ಹಗ್ಗ ಹಿಡಿದು ಎಳೆದು ಪುನೀತರಾದರು.ಇನ್ನೂ ಕೆಲವರು ಹಗ್ಗ ಮುಟ್ಟಿ ನಮಸ್ಕರಿಸಿ, ಚಾಮುಂಡೇಶ್ವರಿ ಗೆ ಜೈ ಎಂದು ಘೋಷಣೆ ಕೂಗಿದರು.

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *