ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ…ನಾಡಿನಿಂದ ಕಾಡಿನತ್ತ ಹೊರಟ ಅಭಿಮನ್ಯು ಅಂಡ್ ಟೀಂ…

ಮೈಸೂರು,ಅ26,Tv10 ಕನ್ನಡ

ವಿಶ್ವವಿಖ್ಯಾತ ದಸರಾ ಮಹೋತ್ಸವ ಯಶಸ್ವಿಗೊಳಿಸಿದ ಅಭಿಮನ್ಯು ತಂಡಕ್ಕೆ ಅರಮನೆ ಆವರಣದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ದಸರೆಯ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥಿಗಳಾಗಿದ್ದ ಗಜಪಡೆ ಇಂದು ತಮ್ಮ ಸ್ವಸ್ಥಾನಕ್ಕೆ ಹಿಂದಿರುಗಿದವು.ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸೆಂಡ್ ಆಫ್ ಮಾಡಲಾಯಿತು. ಇದೇ ವೇಳೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ, ವರಲಕ್ಷ್ಮಿ, ಭೀಮ, ಕಂಜನ್, ಗೋಪಿ, ಹಿರಣ್ಯ, ಸುಗ್ರೀವ, ವಿಜಯ, ರೋಹಿತ್ ಹಾಗೂ ಪ್ರಶಾಂತ್ ಆನೆಗಳು ಯಶಸ್ವಿ ಜಂಬೂ ಸವಾರಿಯಲ್ಲಿ ತಮ್ಮ ಪಾತ್ರ ಮುಗಿಸಿ ಕಾಡಿನತ್ತ ತೆರಳಿದವು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *