ಕರ್ನಾಟಕ ಹೆಸರಿಗೆ 50 ವರ್ಷ…ನವೆಂಬರ್ 1 ರಂದು ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಮನವಿ…

ಮೈಸೂರು,ಅ28,Tv10 ಕನ್ನಡ

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ಪೂರ್ಣಗೊಂಡ ಹಿನ್ನಲೆ ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ವಿಶೇಷವಾಗಿ ಆಚರಿಸಲು ಸರ್ಕಾರ ಉದ್ದೇಶಿಸಿದೆ.ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು ಕೆಲವು ತೀರ್ಮಾನಗಳನ್ನ ಕೈಗೊಳ್ಳಲಾಗಿದ್ದು ಸ್ವರೂಪಗಳನ್ನ ಸಿದ್ದಪಡಿಸಲಾಗಿದೆ.

1.ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಹಳದಿ ಬಣ್ಣದ ರಂಗೋಲಿ ಹಾಕಿ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ..ಉಸಿರಾಗಲಿ ಕನ್ನಡ ಎಂಬ ಘೋಷಣಾ ವಾಕ್ಯ ಬರೆಯುವಂತೆ ನಾಗರೀಕರಿಗೆ ಮನವಿ ಮಾಡುವುದು.

2.ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಿಂದ ನಾಡಗೀತೆ ಪ್ರಸಾರ ಮಾಡುವುದು.ರಾಷ್ಟ್ರಗೀತೆಗೆ ಎದ್ದುನಿಂತು ಗೌರವ ಸಲ್ಲಿಸುವಂತೆ ನಾಡಗೀತೆಗೂ ಎದ್ದು ನಿಂತು ಗೌರವ ಸಲ್ಲಿಸಲು ಮನವಿ ಮಾಡುವುದು.

3.ನವೆಂಬರ್ 1 ರಂದು ರಾಜ್ಯದ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಸಂಜೆ 5 ಗಂಟೆಗೆ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನ ಆಕಾಶದೆತ್ತರಕ್ಕೆ ಹಾರಿ ಬಿಟ್ಟು ಸುವರ್ಣ ಸಂಭ್ರಮ ಆಚರಿಸುವಂತೆ ಮನವಿ ಮಾಡುವುದು.

4.ನವೆಂಬರ್ 1 ರಂದು ಸಂಜೆ 7 ಗಂಟೆಗೆ ಎಲ್ಲಾ ಮನೆ,ಕಚೇರಿಗಳ ಮುಂದೆ ದೀಪ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನ ಜಿಲ್ಲಾಡಳಿತ ನಾಗರೀಕರ ಹಾಗೂ ಸಂಘಸಂಸ್ಥೆಗಳ ನೆರವಿನಿಂದ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್.ಎಸ್.ತಂಗಡಗಿ ರವರು ಎಲ್ಲಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *