ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಮೈಸೂರು,ನ1,Tv10 ಕನ್ನಡ

ಹುಲಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದನಗಾಹಿ ವೀರಭದ್ರ ಬೋವಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ವೀರಭದ್ರಭೋವಿಯ ಆರೋಗ್ಯವನ್ನ ಶಾಸಕ ದರ್ಶನ್ ಧ್ರುವನಾರಾಯಣ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ವೀರಭದ್ರ ಭೋವಿಯ ಕತ್ತಿನ ಭಾಗ ಮತ್ತು ದೇಹದ ಭಾಗದಲ್ಲಿ ಗಾಯವಾಗಿದೆ. ಒಂದು ವಾರದಲ್ಲಿ ಗುಣಮುಖರಾಗುತ್ತಾರೆ ಎಂದು ಕೆಆರ್ ಆಸ್ಪತ್ರೆ ವೈದ್ಯಾಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ.ಎರಡು ಜಾನುವಾರುಗಳನ್ನು ವ್ಯಾಘ್ರ ಬಲಿ ಪಡೆದಿದೆ. ಪರಿಹಾರ ಕಲ್ಪಿಸಿ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಿ ಎಂದು ವೀರಭದ್ರ ಭೋವಿ ಶಾಸಕ ದರ್ಶನ ಧ್ರುವನಾರಾಯಣ್ ಬಳಿ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಮತ್ತು ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸಿ ಕೊಡುವುದಾಗಿ ಅಭಯ ನೀಡಿದ್ದಾರೆ.
ಘಟನೆಯಿಂದ ಹೆಡಿಯಾಲ ಅರಣ್ಯ ವಲಯದ
ನಾಗಣಪುರ, ಮಹದೇವ ನಗರ ಅಂಜನಾಪುರ ಹಾದನೂರು ಒಡೆಯನಪುರ ಬಂಕಹಳ್ಳಿ ಗ್ರಾಮಗಳ ಸುತ್ತಮುತ್ತಲ ಸಾರ್ವಜನಿಕರು ಮತ್ತು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಸಕರಿಗೆ ಮಾಜಿ ಶಾಸಕ ಕಳಲೆ ಶಿವಮೂರ್ತಿ ಸೇರಿದಂತೆ ಇತರ ಮುಖಂಡರು ಸಾಥ್ ನೀಡಿದ್ದರು..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *