ಭಾರಿ ಮಳೆಗೆ ಕುಸಿದ ಮನೆ…ಪರಿಹಾರ ಮಂಜೂರಾತಿಯಲ್ಲಿ ತಾರತಮ್ಯ…ದಸರಾ ಪೈಲ್ವಾನ್ ಕುಟುಂಬ ಹೈರಾಣು…

ನಂಜನಗೂಡು,ನ3,Tv10 ಕನ್ನಡ

ಎರಡು ವರ್ಷಗಳ ಹಿಂದೆ ಬಿದ್ದ ಭಾರಿ ಮಳೆಗೆ ಕುಸಿದ ಬಿದ್ದ ಮನೆಗೆ ಇನ್ನೂ ಪರಿಹಾರ ಬಂದಿಲ್ಲ.ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿರುವ ದಸರಾ ಪೈಲ್ವಾನ್ ಖ್ಯಾತಿ ಗಾಂಧಿ ಕುಟುಂಬ ಹೈರಾಣವಾಗಿದೆ.ಪರಿಹಾರ ನೀಡದಿದ್ದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ನಂಜನಗೂಡು ತಾಲೂಕು ಕಳಲೆ ಗ್ರಾಮದ ಪೈಲ್ವಾನ್ ಗಾಂಧಿ ಇಂತಹ ತೀರ್ಮಾನಕ್ಕೆ ಬಂದಿದ್ದಾರೆ.
2022 ರಲ್ಲಿ ಬಿದ್ದ ಭಾರಿ ಮಳೆ ಮತ್ತು ಬಿರುಗಾಳಿಗೆ ಪೈ.ಗಾಂಧಿ ಕುಟುಂಬ ವಾಸವಿದ್ದ ಮಣ್ಣಿನ ಮನೆ ಕುಸಿದಿದೆ.ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದಾಗ ಸಂಭಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಶೇ.75 ರಷ್ಟು ಹಾನಿ ಆಗಿದೆ ಎಂದು ವರದಿ ನೀಡಿದ್ದಾರೆ.ವರದಿಯ ಆಧಾರದಂತೆ ಮನೆ ಪುನರ್ ನಿರ್ಮಾಣಕ್ಕೆ ಸರ್ಕಾರ 5 ಲಕ್ಷ ಮಂಜೂರು ಮಾಡಬೇಕು.ಆದರೆ ಮಂಜೂರಾಗಿರುವುದು ಕೇವಲ 1.20 ಲಕ್ಷ ಮಾತ್ರ. ಸರ್ಕಾರಿ ಸಿಬ್ಬಂದಿಗಳ ಕುಮ್ಮಕ್ಕಿನಿಂದ ಕ್ಯಾಟಗರಿ ಬದಲಾವಣೆ ಆಗಿದೆ.ಅರ್ಜಿಯನ್ನ ಪುನರ್ ಪರಿಶೀಲನೆ ಮಾಡಿ ಮನೆ ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ನಿರಂತರವಾಗಿ ಗಾಂಧಿ ಮನವಿ ಸಲ್ಲಿಸುತ್ತಿದ್ದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.ಸ್ವಂತ ಸೂರಿಲ್ಲದೆ ಪರದಾಡುತ್ತಿರುವ ಗಾಂಧಿ ಇದೀಗ ಪ್ರತಿಭಟನೆ ಹಾದಿ ಹಿಡಿಯಲು ಚಿಂತಿಸಿದ್ದಾರೆ. 25 ವರ್ಷಗಳ ಕಾಲ ರಾಜ್ಯ ಮಟ್ಟದಲ್ಲಿ ಹಾಗೂ ದಸರಾ ಕುಸ್ತಿ ಪಂದ್ಯಗಳಲ್ಲಿ ಭಾಗವಹಿಸಿ ಕುಸ್ತಿ ಅಖಾಡದಲ್ಲಿ ಹೆಸರು ಗಳಿಸಿರುವ ಪೈ. ಗಾಂಧಿ ಇದೀಗ ಪರಿಪಾಟಲು ಅನುಭವಿಸುತ್ತಿದ್ದಾರೆ.ಇನ್ನಾದರೂ ಜನಪ್ರತಿನಿಧಿಗಳಾಗಲಿ ಅಥವಾ ಹಿರಿಯ ಅಧಿಕಾರಿಗಳಾಗಲಿ ಪೈ.ಗಾಂಧಿ ಮನವಿಗೆ ಸ್ಪಂದಿಸಿ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *