ಭಾರಿ ಮಳೆಗೆ ಕುಸಿದ ಮನೆ…ಪರಿಹಾರ ಮಂಜೂರಾತಿಯಲ್ಲಿ ತಾರತಮ್ಯ…ದಸರಾ ಪೈಲ್ವಾನ್ ಕುಟುಂಬ ಹೈರಾಣು…

ನಂಜನಗೂಡು,ನ3,Tv10 ಕನ್ನಡ

ಎರಡು ವರ್ಷಗಳ ಹಿಂದೆ ಬಿದ್ದ ಭಾರಿ ಮಳೆಗೆ ಕುಸಿದ ಬಿದ್ದ ಮನೆಗೆ ಇನ್ನೂ ಪರಿಹಾರ ಬಂದಿಲ್ಲ.ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿರುವ ದಸರಾ ಪೈಲ್ವಾನ್ ಖ್ಯಾತಿ ಗಾಂಧಿ ಕುಟುಂಬ ಹೈರಾಣವಾಗಿದೆ.ಪರಿಹಾರ ನೀಡದಿದ್ದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ನಂಜನಗೂಡು ತಾಲೂಕು ಕಳಲೆ ಗ್ರಾಮದ ಪೈಲ್ವಾನ್ ಗಾಂಧಿ ಇಂತಹ ತೀರ್ಮಾನಕ್ಕೆ ಬಂದಿದ್ದಾರೆ.
2022 ರಲ್ಲಿ ಬಿದ್ದ ಭಾರಿ ಮಳೆ ಮತ್ತು ಬಿರುಗಾಳಿಗೆ ಪೈ.ಗಾಂಧಿ ಕುಟುಂಬ ವಾಸವಿದ್ದ ಮಣ್ಣಿನ ಮನೆ ಕುಸಿದಿದೆ.ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದಾಗ ಸಂಭಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಶೇ.75 ರಷ್ಟು ಹಾನಿ ಆಗಿದೆ ಎಂದು ವರದಿ ನೀಡಿದ್ದಾರೆ.ವರದಿಯ ಆಧಾರದಂತೆ ಮನೆ ಪುನರ್ ನಿರ್ಮಾಣಕ್ಕೆ ಸರ್ಕಾರ 5 ಲಕ್ಷ ಮಂಜೂರು ಮಾಡಬೇಕು.ಆದರೆ ಮಂಜೂರಾಗಿರುವುದು ಕೇವಲ 1.20 ಲಕ್ಷ ಮಾತ್ರ. ಸರ್ಕಾರಿ ಸಿಬ್ಬಂದಿಗಳ ಕುಮ್ಮಕ್ಕಿನಿಂದ ಕ್ಯಾಟಗರಿ ಬದಲಾವಣೆ ಆಗಿದೆ.ಅರ್ಜಿಯನ್ನ ಪುನರ್ ಪರಿಶೀಲನೆ ಮಾಡಿ ಮನೆ ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ನಿರಂತರವಾಗಿ ಗಾಂಧಿ ಮನವಿ ಸಲ್ಲಿಸುತ್ತಿದ್ದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.ಸ್ವಂತ ಸೂರಿಲ್ಲದೆ ಪರದಾಡುತ್ತಿರುವ ಗಾಂಧಿ ಇದೀಗ ಪ್ರತಿಭಟನೆ ಹಾದಿ ಹಿಡಿಯಲು ಚಿಂತಿಸಿದ್ದಾರೆ. 25 ವರ್ಷಗಳ ಕಾಲ ರಾಜ್ಯ ಮಟ್ಟದಲ್ಲಿ ಹಾಗೂ ದಸರಾ ಕುಸ್ತಿ ಪಂದ್ಯಗಳಲ್ಲಿ ಭಾಗವಹಿಸಿ ಕುಸ್ತಿ ಅಖಾಡದಲ್ಲಿ ಹೆಸರು ಗಳಿಸಿರುವ ಪೈ. ಗಾಂಧಿ ಇದೀಗ ಪರಿಪಾಟಲು ಅನುಭವಿಸುತ್ತಿದ್ದಾರೆ.ಇನ್ನಾದರೂ ಜನಪ್ರತಿನಿಧಿಗಳಾಗಲಿ ಅಥವಾ ಹಿರಿಯ ಅಧಿಕಾರಿಗಳಾಗಲಿ ಪೈ.ಗಾಂಧಿ ಮನವಿಗೆ ಸ್ಪಂದಿಸಿ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *