ಸಚಿವರೊಂದಿಗೆ ಸಿಎಂ ಸಿದ್ದು ಉಪಹಾರಕೂಟ…ಡಿಕೆಶಿ ಸೇರಿದಂತೆ ಹಲವರು ಭಾಗಿ…
- TV10 Kannada Exclusive
- November 4, 2023
- No Comment
- 225

ಬೆಂಗಳೂರು,ನ4,Tv10 ಕನ್ನಡ
ಲೋಕಸಭೆ ಚುನಾವಣೆ ಸನಿಹವಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ.ಮುಖ್ಯ ಮಂತ್ರಿಗಳ ಕಾವೇರಿ ನಿವಾಸದಲ್ಲಿ ಶನಿವಾರ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜಿಸಿದ್ದಾರೆ.
ಉಪಾಹಾರಕೂಟದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್, ಸಚಿರಾದ ಡಾ.ಜಿ.ಪರಮೇಶ್ವರ್, ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೃಷ್ಣ ಭೈರೇಗೌಡ,ಸಂತೋಷ್ ಲಾಡ್, ಬೋಸರಾಜು ಸೇರಿ 15 ಸಚಿವರು ಭಾಗಿಯಾಗಿದ್ದಾರೆ.
ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.ಅಲ್ಲದೆ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ಸಂದರ್ಭದಲ್ಲಿ ಕಾವೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ…