ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ…ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ಧಾಳಿ…

ಮೈಸೂರು,ನ4,Tv10 ಕನ್ನಡ

ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ ಎಂದು
ಮೈಸೂರಿನಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು.
ನಾನೆ ಐದು ವರ್ಷ ಸಿಎಂ ಅಂದರು
ವಿರೋಧ ವ್ಯಕ್ತವಾದಾಗ ಉಲ್ಟಾ ಹೊಡೆದರು.
ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ ಎಂದು ವ್ಯಂಗ್ಯವಾಡಿದರು.
ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ.
ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು.ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ ತರುವುದಾಗಿ ಹೇಳಿದ್ದರು.ಈಗ ಅದನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ.
ಆದ್ದರಿಂದ ಸಾಧು ಸಂತರ ಶಾಪ ಸಿದ್ದರಾಮಯ್ಯಗೆ ತಟ್ಟುತ್ತೆ ಅಲ್ಲದರ
ದಲಿತರು ಹಿಂದುಳಿದ ವರ್ಗದವರ ಶಾಪವು ತಟ್ಟುತ್ತದೆ.ಅವರನ್ನು ಬಳಸಿಕೊಂಡು ಸಿಎಂ ಆದವರು ಸಿದ್ದರಾಮಯ್ಯ ಎಂದು ವಾಗ್ಧಾಳಿ ನಡೆಸಿದರು.
ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ.
ತಿಂಗಳು ವರ್ಷ ಅಲ್ಲ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂದು
ಮೈಸೂರಿನಲ್ಲಿ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *