ಸಿಡಿಲು ಬಡಿದು ಎರಡು ಹಸುಗಳು ಸಾವು… ಪ್ರಾಣಾಪಾಯದಿಂದ ರೈತ ಪಾರು…
- TV10 Kannada Exclusive
- November 5, 2023
- No Comment
- 150
ನಂಜನಗೂಡು,ನ5,Tv10 ಕನ್ನಡ
ಸಿಡಿಲು ಬಡಿದ ಪರಿಣಾಮ ಎರಡು ಹಸುಗಳು ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚನ್ನಶೆಟ್ಟಿ ಎಂಬುವವರಿಗೆ ಸೇರಿದ ಹಸುಗಳಾಗಿದ್ದು ಜಮೀನಿನಲ್ಲಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಮಳೆ ಪ್ರಾರಂಭವಾಗಿದೆ. ಹಸುಗಳನ್ನು ಹುಣಸೆ ಮರದ ಕೆಳಗಡೆ ಕಟ್ಟಲಾಗಿತ್ತು.ಮೃತ ಹಸುಗಳ ಪೈಕಿ ಒಂದು ಹಸು ಗರ್ಭಿಣಿಯಾಗಿದೆ.
ಹಸುಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಚನ್ನಶೆಟ್ಟಿ
ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ…