ಮುಡಾ ಕಾರ್ಯದರ್ಶಿ ಸಹಿ ನಕಲು ಆರೋಪ…ಜಿಲ್ಲಾಧಿಕಾರಿಗೆ ದೂರು…

ಮೈಸೂರು,ನ5,Tv10 ಕನ್ನಡ

ವರ್ಗಾವಣೆಗೊಂಡ ಮುಡಾ ಕಾರ್ಯದರ್ಶಿ ಎಸ್.ಕುಸುಮಕುಮಾರಿ ರವರ ಸಹಿ ನಕಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಫೋರ್ಜರಿ ಮಾಡಿರುವ ಶಂಕಿತ ಇಬ್ಬರು ಮುಡಾ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಸುಮ ಕುಮಾರಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕುಸುಮಕುಮಾರಿ ರವರನ್ನ ಸರ್ಕಾರ ವರ್ಗಾವಣೆ ಮಾಡಿದ್ದು ಇದೇ ಸ್ಥಳಕ್ಕೆ ಶೇಖರ್ ಜಿ.ಡಿ.ರವರನ್ನ ನಿಯುಕ್ತಿಗೊಳಿಸಲಾಗಿದೆ.ವರ್ಗಾವಣೆಯನ್ನ ಪ್ರಶ್ನಿಸಿ ಕುಸುಮಕುಮಾರಿ ರವರು ನ್ಯಾಯಾಲಯದ ಮೊರೆ ಹೋಗಿ ಆದೇಶಕ್ಕಾಗಿ ಕಾಯುತ್ತಿದ್ದಾರೆ.ಇಂತಹ ಸಂಧರ್ಭದಲ್ಲಿ ಪ್ರಾಧಿಕಾರದ ನೌಕರರಾದ ನಂದೀಶ್ ಹಾಗೂ ಗುರುದತ್ (out source) ರವರು ಡಿ.ಗ್ರೂಪ್ ನೌಕರ ರವಿ ಎಂಬಾತನ ಜೊತೆ ವಲಯ ಕಚೇರಿ 1 ರ ಮಹದೇವನಾಯಕ ಎಂಬವರ ಹೆಸರಿನ ಸರ್ವೆ ನಂ.96/96-A ದಾಖಲೆಗಳನ್ನ ಸಹಿ ಮಾಡುವಂತೆ ಕಳುಹಿಸಿದ್ದಾರೆ.ದಾಖಲೆಗಳಿಗೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಶೇಖರ್ ರವರ ಸಹಿ ಹಾಕಿಸಿಕೊಳ್ಳುವಂತೆ ತಿಳಿಸಿ ಕುಸುಮಕುಮಾರಿ ರವರು ತಿರಸ್ಕರಿಸಿ ವಾಪಸ್ ಕಳುಹಿಸಿರುತ್ತಾರೆ.ಹೀಗಿದ್ದೂ ದಾಖಲೆಗಳ ಮೇಲೆ ನನ್ನ ಸಹಿ ಮಾಡಲಾಗಿದೆ ಎಂದು ಆರೋಪಿಸಿರುವ ಕುಸುಮಕುಮಾರಿ ರವರು ನಂದೀಶ್ ಹಾಗೂ ಗುರುದತ್ ರವರ ವಿರುದ್ದ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *