ಮುಡಾದಲ್ಲಿ 50-50 ಅನುಪಾತದಲ್ಲಿ ಭಾರಿ ಗೋಲ್ ಮಾಲ್… ಅಕ್ರಮ ಆಸ್ತಿ ಹಂಚಿಕೆ ಆರೋಪ…ಸರ್ಕಾರದ ಅಧೀನ ಕಾರ್ಯದರ್ಶಿ ಯಿಂದ ಜಿಲ್ಲಾಧಿಕಾರಿಗೆ ನಿರ್ದೇಶನ…ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸುವಂತೆ ಖಡಕ್ ಆದೇಶ…

ನಟರಾಜ್

ಮೈಸೂರು,ನ9,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಿಯಮಬಾಹಿರವಾಗಿ ಭೂಮಾಲೀಕರಿಗೆ ಪರಿಹಾರ ನೀಡದೆ ಬದಲಾಗಿ ಅಭಿವೃದ್ದಿ ಹೊಂದಿದ ಸ್ಥಳಗಳಲ್ಲಿ 50-50 ಅನುಪಾತದಡಿಯಲ್ಲಿ ಆಸ್ತಿ ಹಂಚಿಕೆ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದಾಗಿ ಮುಡಾದ ಮಾಜಿ ಅಧ್ಯಕ್ಷರು,ಹಿಂದಿನ ಆಯುಕ್ತರು,ಹಾಲಿ ಆಯುಕ್ತರು,ವಿಶೇಷ ಭೂಸ್ವಾಧೀನಾಧಿಕಾರಿಗಳು,ವಿಶೇಷ ತಹಸೀಲ್ದಾರ್ ಗಳ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ನಟರಾಜ್ ಎಂಬುವರು ದೂರು ನೀಡಿದ್ದರು.ಈ ಕುರಿತಂತೆ ನಿಯಮಾನುಸಾರ ದಾಖಲೆಗಳನ್ನ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.ಆದರೆ ಇದುವರೆಗೆ ಸರ್ಕಾರಕ್ಕೆ ಯಾವುದೇ ವರದಿ ಸ್ವೀಕೃತವಾಗಿಲ್ಲ.ಜಿಲ್ಲಾಧಿಕಾರಿಗಳಿಗೆ ಪತ್ರ ಸಂಖ್ಯೆ ನ.ಆ.ಇ.109 ಮೈ.ಆ.ಪ್ರಾ.2023 ದಿನಾಂಕ 18-3-2023 ರಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆಯುವ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಹಾಗೂ ಸೂಕ್ತ ಸಲಹೆ ಮತ್ತು ಸೂಚನೆ ಹಾಗೂ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿತ್ತು.ಅದರಂತೆ ಪ್ರಾಧಿಕಾರದ ಸಭೆಗಳಲ್ಲಿ ಹಾಜರಾಗಿರುವ ಬಗ್ಗೆ ಮಾಹಿತಿ ಇರುವುದಿಲ್ಲ.ಆದ್ದರಿಂದ ಮೇಲ್ಕಂಡ ಎಲ್ಲಾ ದೂರು ಅರ್ಜಿಗಳಲ್ಲಿನ ಪ್ರತಿಯೊಂದು ಆರೋಪಗಳ ಕುರಿತು ಹಾಗೂ ಮುಡಾದಲ್ಲಿ ನಿಯಮಗಳನ್ನ ಉಲ್ಲಂಘಿಸಿ ನಿವೇಶನಗಳನ್ನ ಮಂಜೂರು ಮಾಡಿ ಕ್ರಯಪತ್ರ ಮಾಡಿಕೊಡುತ್ತಿರುವ ಬಗ್ಗೆ ಹಾಗೂ ಮೈಸೂರು ಹಿನಕಲ್ ಸ.ನಂ.293 ಹಾಗೂ 292 ರ ಅಕ್ರಮ ಖಾತೆ ಮಾಡಿಕೊಟ್ಟಿರುವ ಬಗ್ಗೆ ಉಲ್ಲೇಖಿಸಿ ನಿಯಮಾನುಸಾರ ಪರಿಶೀಲಿಸಿ ಸ್ಪಷ್ಠ ಅಭಿಪ್ರಾಯದೊಂದಿಗೆ ಸೂಕ್ತ ವರದಿಯನ್ನ ತುರ್ತಾಗಿ ಸಲ್ಲಿಸುವಂತೆ ಕೋರಲಾಗಿದ್ದು , ತಪ್ಪಿದ್ದಲ್ಲಿ ಮೇಲಿನ ದೂರುಗಳ ಕುರಿತು ಸೂಕ್ತ ಕ್ರಮ ವಹಿಸದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿದ್ದು ಮುಂದಿನ ಸೂಕ್ತ ಕ್ರಮ ಏಕೆ ಕೈಗೊಳ್ಳಬಾರದು ಎಂಬ ಬಗ್ಗೆ ವರದಿ ನೀಡುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ಸರ್ಕಾರ ಅಧೀನ ಕಾರ್ಯದರ್ಶಿ ಲತಾ.ಕೆ.ರವರು ನ.ಆ.ಇ.267 ಮೈ.ಆ.ಪ್ರಾ 2023 ದಿನಾಂಕ 4-11-2023 ರ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *