ಮುಡಾದಲ್ಲಿ 50-50 ಅನುಪಾತದಲ್ಲಿ ಭಾರಿ ಗೋಲ್ ಮಾಲ್… ಅಕ್ರಮ ಆಸ್ತಿ ಹಂಚಿಕೆ ಆರೋಪ…ಸರ್ಕಾರದ ಅಧೀನ ಕಾರ್ಯದರ್ಶಿ ಯಿಂದ ಜಿಲ್ಲಾಧಿಕಾರಿಗೆ ನಿರ್ದೇಶನ…ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸುವಂತೆ ಖಡಕ್ ಆದೇಶ…

ನಟರಾಜ್

ಮೈಸೂರು,ನ9,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಿಯಮಬಾಹಿರವಾಗಿ ಭೂಮಾಲೀಕರಿಗೆ ಪರಿಹಾರ ನೀಡದೆ ಬದಲಾಗಿ ಅಭಿವೃದ್ದಿ ಹೊಂದಿದ ಸ್ಥಳಗಳಲ್ಲಿ 50-50 ಅನುಪಾತದಡಿಯಲ್ಲಿ ಆಸ್ತಿ ಹಂಚಿಕೆ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದಾಗಿ ಮುಡಾದ ಮಾಜಿ ಅಧ್ಯಕ್ಷರು,ಹಿಂದಿನ ಆಯುಕ್ತರು,ಹಾಲಿ ಆಯುಕ್ತರು,ವಿಶೇಷ ಭೂಸ್ವಾಧೀನಾಧಿಕಾರಿಗಳು,ವಿಶೇಷ ತಹಸೀಲ್ದಾರ್ ಗಳ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ನಟರಾಜ್ ಎಂಬುವರು ದೂರು ನೀಡಿದ್ದರು.ಈ ಕುರಿತಂತೆ ನಿಯಮಾನುಸಾರ ದಾಖಲೆಗಳನ್ನ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.ಆದರೆ ಇದುವರೆಗೆ ಸರ್ಕಾರಕ್ಕೆ ಯಾವುದೇ ವರದಿ ಸ್ವೀಕೃತವಾಗಿಲ್ಲ.ಜಿಲ್ಲಾಧಿಕಾರಿಗಳಿಗೆ ಪತ್ರ ಸಂಖ್ಯೆ ನ.ಆ.ಇ.109 ಮೈ.ಆ.ಪ್ರಾ.2023 ದಿನಾಂಕ 18-3-2023 ರಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆಯುವ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಹಾಗೂ ಸೂಕ್ತ ಸಲಹೆ ಮತ್ತು ಸೂಚನೆ ಹಾಗೂ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿತ್ತು.ಅದರಂತೆ ಪ್ರಾಧಿಕಾರದ ಸಭೆಗಳಲ್ಲಿ ಹಾಜರಾಗಿರುವ ಬಗ್ಗೆ ಮಾಹಿತಿ ಇರುವುದಿಲ್ಲ.ಆದ್ದರಿಂದ ಮೇಲ್ಕಂಡ ಎಲ್ಲಾ ದೂರು ಅರ್ಜಿಗಳಲ್ಲಿನ ಪ್ರತಿಯೊಂದು ಆರೋಪಗಳ ಕುರಿತು ಹಾಗೂ ಮುಡಾದಲ್ಲಿ ನಿಯಮಗಳನ್ನ ಉಲ್ಲಂಘಿಸಿ ನಿವೇಶನಗಳನ್ನ ಮಂಜೂರು ಮಾಡಿ ಕ್ರಯಪತ್ರ ಮಾಡಿಕೊಡುತ್ತಿರುವ ಬಗ್ಗೆ ಹಾಗೂ ಮೈಸೂರು ಹಿನಕಲ್ ಸ.ನಂ.293 ಹಾಗೂ 292 ರ ಅಕ್ರಮ ಖಾತೆ ಮಾಡಿಕೊಟ್ಟಿರುವ ಬಗ್ಗೆ ಉಲ್ಲೇಖಿಸಿ ನಿಯಮಾನುಸಾರ ಪರಿಶೀಲಿಸಿ ಸ್ಪಷ್ಠ ಅಭಿಪ್ರಾಯದೊಂದಿಗೆ ಸೂಕ್ತ ವರದಿಯನ್ನ ತುರ್ತಾಗಿ ಸಲ್ಲಿಸುವಂತೆ ಕೋರಲಾಗಿದ್ದು , ತಪ್ಪಿದ್ದಲ್ಲಿ ಮೇಲಿನ ದೂರುಗಳ ಕುರಿತು ಸೂಕ್ತ ಕ್ರಮ ವಹಿಸದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿದ್ದು ಮುಂದಿನ ಸೂಕ್ತ ಕ್ರಮ ಏಕೆ ಕೈಗೊಳ್ಳಬಾರದು ಎಂಬ ಬಗ್ಗೆ ವರದಿ ನೀಡುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ಸರ್ಕಾರ ಅಧೀನ ಕಾರ್ಯದರ್ಶಿ ಲತಾ.ಕೆ.ರವರು ನ.ಆ.ಇ.267 ಮೈ.ಆ.ಪ್ರಾ 2023 ದಿನಾಂಕ 4-11-2023 ರ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *