ಹಳ್ಳಕ್ಕೆ ಉರುಳಿದ ಗೂಡ್ಸ್ ವ್ಯಾನ್…ಓರ್ವ ಸಾವು…10 ಮಂದಿಗೆ ಗಾಯ…

ಹಳ್ಳಕ್ಕೆ ಉರುಳಿದ ಗೂಡ್ಸ್ ವ್ಯಾನ್…ಓರ್ವ ಸಾವು…10 ಮಂದಿಗೆ ಗಾಯ…

ಮೈಸೂರು,ನ12,Tv10 ಕನ್ನಡ

ಚಾಲಕನ ನಿಯಂತ್ರಣ ತಪ್ಪಿ ಅಶೋಕಾ ಲೈಲ್ಯಾಂಡ್ ಗೂಡ್ಸ್ ವಾಹನ ಸೇತುವೆಯ ಹಳ್ಳಕ್ಕೆ ಬಿದ್ದ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಮೇಗಳಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು 10 ಮಂದಿ ಗಾಯಗೊಂಡಿದ್ದಾರೆ.ಎಲ್ಲರೂ ಬಂಡೀಪಾಳ್ಯ ಗ್ರಾಮದ ನಿವಾಸಿಗಳು.ಬಂಡೀಪಾಳ್ಯದಿಂದ ಟಿ.ನರಸೀಪುರಕ್ಕೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ರವಿಚಂದ್ರ,ಸುನಿಲ್,ದರ್ಶನ್,ನಿತಿನ್,ಪವನ್,ದರ್ಶನ್, ನಿತಿನ್,ಶಶಾಂಕ್,ವಿಜಯ್,ವಿಕಾಶ್,ಸುದೀಪ್ ಗಾಯಗೊಂಡವರು.

ಗಾಯಾಳುಗಳನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಗಾಯಗೊಂಡವರ ಪೈಕಿ ದರ್ಶನ್(23) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಟಿ.ನರಸೀಪುರದಲ್ಲಿ ಬಾಳೆಕಾಯಿ ಲೋಡ್ ಮಾಡಲು ತೆರಳುತ್ತಿದ್ದರೆಂದು ಹೇಳಲಾಗಿದೆ.ಗಾಯಗೊಂಡವರಿಗೆ ಚಿಕಿತ್ಸೆ ಮುಂದುವರೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಹೇಳಲಾಗಿದೆ.ಸ್ಥಳಕ್ಕೆ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವರುಣ ಠಾಣೆಯ ಪಿಎಸ್ಸೈ ಚೇತನ್ ರವರು ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *