ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…
- TV10 Kannada Exclusive
- November 13, 2023
- No Comment
- 152
ಕೆ.ಆರ್.ನಗರ,ನ13,Tv10 ಕನ್ನಡ
ಮೈಸೂರು ಜಿಲ್ಲೆ
ಕೆ ಆರ್ ನಗರ ತಾಲ್ಲೂಕು ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ.ರೈತ ಮಂಜೇಗೌಡರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು.
ಕಳೆದ ಒಂದು ತಿಂಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು.
ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು.
ಬಟಿಗನಹಳ್ಳಿ, ಮುಂಜನಹಳ್ಳಿ, ಸೋಮನಹಳ್ಳಿ, ಸಂಬ್ರವಳ್ಳಿ,ಹೊಸ ಅಗ್ರಹಾರ ಸೇರಿ ಹಲವು ಕಡೆ ದಾಳಿ ನಡೆಸಿ
ಕರು ನಾಯಿ ಮೇಕೆ ತಿಂದು ಹಾಕಿತ್ತು.
ಮೂರು ದಿನದ ಹಿಂದೆ ರೈತ ಮಂಜೇಗೌಡರ ಜಮೀನಿನಲ್ಲಿ ಕಾಣಿಸಿಕೊಂಡಿತ್ತು.
ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ ಬೋನು ಇರಿಸಲಾಗಿತ್ತು.
ಬೋನಿಗೆ ಬಿದ್ದ ಚಿರತೆಯನ್ನ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ…