ಕೆಂಪಸಿದ್ದನ ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..
- TV10 Kannada Exclusive
- November 13, 2023
- No Comment
- 414

ಮೈಸೂರು,ನ13,Tv10 ಕನ್ನಡ

ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ರವರು ಇಂದು ನಂಜನಗೂಡು ತಾಲೂಕಿನ ಕೆಂಪ ಸಿದ್ದನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಕಂದಾಯ ಗ್ರಾಮ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮಾಡಿದರು

ಈ ವೇಳೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ನೀಡುವ ವಿವಿಧ ಕೃಷಿ ಸಲಕರಣೆಗಳ ವಿತರಣೆ ಕುರಿತು ಮಾಹಿತಿ ಪಡೆದರು ಹಾಗೂ ಅಟಲ್ ಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಈ ಸಂದರ್ಭದಲ್ಲಿ ಮೈಸೂರು ಉಪವಿಭಾಗಾಧಿಕಾರಿಗಳಾದ ರಕ್ಷಿತ್, ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್,ಡಿಡಿ ಎಲ್ ಆರ್ ರಮ್ಯಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…