ಭೂಮಿ ಕಳೆದುಕೊಂಡ ರೈತನಿಗೆ ಉದ್ಯೋಗ ನೀಡದ ಕಂಪನಿ…ಡೆತ್ ನೋಟ್ ಬರೆದು ಅನ್ನದಾತ ಆತ್ಮಹತ್ಯೆ…

  • Crime
  • November 20, 2023
  • No Comment
  • 664

ನಂಜನಗೂಡು,ನ20,Tv10 ಕನ್ನಡ

KIADB ಗೆ ಭೂಮಿ ನೀಡಿದ ರೈತನಿಗೆ ಕೊಟ್ಟ ಮಾತಿನಂತೆ ಉದ್ಯೋಗ ನೀಡದ ಖಾಸಗಿ ಕಂಪನಿ ವಂಚಿಸಿದ ಆರೋಪದ ಹಿನ್ನಲೆ ಅನ್ನದಾತ ಡೆತ್ ನೋಟ್ ಬರೆದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡು ತಾಲೂಕು ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಂಪನಿ ಅಧಿಕಾರಿಗಳ ದುಂಡಾವರ್ತನೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ ಸಿದ್ದರಾಜು(28).

ಸರ್ವೆ ನಂ 96/1 ರಲ್ಲಿ ಸಿದ್ದರಾಜು ಕುಟುಂಬಕ್ಕೆ ಸೇರಿದ ಜಮೀನುಗಳನ್ನ KIADB ಸ್ವಾಧೀನಪಡಿಸಿಕೊಂಡಿದೆ.ಈ ವೇಳೆ ಭೂಮಿ ನೀಡಿದ ಕುಟುಂಬದವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು.ಸಿದ್ದರಾಜು ರವರ ಜಮೀನಿನಲ್ಲಿ ಪಾರ್ಲೆ ಆಗ್ರೋ ಪ್ರೈ.ಲಿ.ಕಂಪನಿ ತಲೆ ನಿರ್ಮಾಣವಾಗಿದೆ.ಕೊಟ್ಟ ಮಾತಿನಂ ಪಾರ್ಲೆ ಆಗ್ರೋ ಪ್ರೈ.ಲಿ.ನಲ್ಲಿ ಸಿದ್ದರಾಜು ಗೆ ಖಾಯಂ ಉದ್ಯೋಗ ದೊರೆತಿಲ್ಲ.ಕಳೆದ 4 ವರ್ಷಗಳಿಂದ ಉದ್ಯೋಗಕ್ಕಾಗಿ ಸಿದ್ದರಾಜು ಅಲೆದಾಡಿದ್ದಾರೆ.KIADB ಸಂಸ್ಥೆ ಅಧಿಕಾರಿಗಳು ಸಹ ಕಂಪನಿ ಮುಖ್ಯಸ್ಥರಿಗೆ ಉದ್ಯೋಗ ನೀಡುವಂತೆ ಆದೇಶಿಸಿದ್ದಾರೆ.ಹೀಗಿದ್ದರೂ ಸಿದ್ದರಾಜು ಗೆ ಉದ್ಯೋಗ ಲಭಿಸಿಲ್ಲ.ಈ ಮಧ್ಯೆ ಉದ್ಯೋಗಕ್ಕಾಗಿ ಸಾಕಷ್ಟು ಭಾರಿ ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.ಯಾವುದಕ್ಕೂ ಜಗ್ಗದ ಕಾರ್ಖಾನೆ ಮುಖ್ಯಸ್ಥರು ಸಿದ್ದರಾಜು ಮನವಿಯನ್ನ ತಿರಸ್ಕರಿಸಿದ್ದಾರೆ.ಇದರಿಂದ ಬೇಸತ್ತ ಸಿದ್ದರಾಜು ನಿನ್ನೆ ಕುಟುಂದವರೆಲ್ಲಾ ಮಹದೇಶ್ವರನ ಬೆಟ್ಟಕ್ಕೆ ತೆರಳಿದ ವೇಳೆ ಡೆತ್ ನೋಟ್ ಬರೆದು ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಡೆತ್ ನೋಟ್ ನಲ್ಲಿ ಕಂಪನಿ ನೀಡಿದ ಕಿರುಕುಳವನ್ನ ಸವಿವರವಾಗಿ ಬರೆದು ನನ್ನ ಸಾವಿಗೆ ಪ್ಲಾಂಟ್ ಹೆಡ್ ರಾಮಪ್ರಸಾದ್ ಹಾಗೂ HR ಮುಷೀದ್ ಉಲ್ಲಾ ಖಾನ್ ಎಂದು ಉಲ್ಲೇಖಿಸಿ ನೇಣಿಗೆ ಶರಣಾಗಿದ್ದಾರೆ.ಇಬ್ಬರಿಗೂ ಶಿಕ್ಷೆ ನೀಡಿ ನ್ಯಾಯ ಕೊಡಿಸಬೇಕೆಂದು ಡೆತ್ ನೋಟ್ ನಲ್ಲಿ ಮನವಿ ಮಾಡಿದ್ದಾರೆ.ಡೆತ್ ನೋಟ್ ಆಧಾರದಂತೆ ನಂಜನಗೂಡು ಗ್ರಾಮಾಂತರ ಪೊಲೀಸರು ಪ್ಲಾಂಟ್ ಹೆಡ್ ರಾಮಪ್ರಸಾದ್ ಹಾಗೂ HR ಮುಷೀದ್ ಉಲ್ಲಾ ಖಾನ್ ವಿರುದ್ದ FIR ದಾಖಲಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *