ಭೂಮಿ ಕಳೆದುಕೊಂಡ ರೈತನಿಗೆ ಉದ್ಯೋಗ ನೀಡದ ಕಂಪನಿ…ಡೆತ್ ನೋಟ್ ಬರೆದು ಅನ್ನದಾತ ಆತ್ಮಹತ್ಯೆ…

  • Crime
  • November 20, 2023
  • No Comment
  • 682

ನಂಜನಗೂಡು,ನ20,Tv10 ಕನ್ನಡ

KIADB ಗೆ ಭೂಮಿ ನೀಡಿದ ರೈತನಿಗೆ ಕೊಟ್ಟ ಮಾತಿನಂತೆ ಉದ್ಯೋಗ ನೀಡದ ಖಾಸಗಿ ಕಂಪನಿ ವಂಚಿಸಿದ ಆರೋಪದ ಹಿನ್ನಲೆ ಅನ್ನದಾತ ಡೆತ್ ನೋಟ್ ಬರೆದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡು ತಾಲೂಕು ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಂಪನಿ ಅಧಿಕಾರಿಗಳ ದುಂಡಾವರ್ತನೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ ಸಿದ್ದರಾಜು(28).

ಸರ್ವೆ ನಂ 96/1 ರಲ್ಲಿ ಸಿದ್ದರಾಜು ಕುಟುಂಬಕ್ಕೆ ಸೇರಿದ ಜಮೀನುಗಳನ್ನ KIADB ಸ್ವಾಧೀನಪಡಿಸಿಕೊಂಡಿದೆ.ಈ ವೇಳೆ ಭೂಮಿ ನೀಡಿದ ಕುಟುಂಬದವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು.ಸಿದ್ದರಾಜು ರವರ ಜಮೀನಿನಲ್ಲಿ ಪಾರ್ಲೆ ಆಗ್ರೋ ಪ್ರೈ.ಲಿ.ಕಂಪನಿ ತಲೆ ನಿರ್ಮಾಣವಾಗಿದೆ.ಕೊಟ್ಟ ಮಾತಿನಂ ಪಾರ್ಲೆ ಆಗ್ರೋ ಪ್ರೈ.ಲಿ.ನಲ್ಲಿ ಸಿದ್ದರಾಜು ಗೆ ಖಾಯಂ ಉದ್ಯೋಗ ದೊರೆತಿಲ್ಲ.ಕಳೆದ 4 ವರ್ಷಗಳಿಂದ ಉದ್ಯೋಗಕ್ಕಾಗಿ ಸಿದ್ದರಾಜು ಅಲೆದಾಡಿದ್ದಾರೆ.KIADB ಸಂಸ್ಥೆ ಅಧಿಕಾರಿಗಳು ಸಹ ಕಂಪನಿ ಮುಖ್ಯಸ್ಥರಿಗೆ ಉದ್ಯೋಗ ನೀಡುವಂತೆ ಆದೇಶಿಸಿದ್ದಾರೆ.ಹೀಗಿದ್ದರೂ ಸಿದ್ದರಾಜು ಗೆ ಉದ್ಯೋಗ ಲಭಿಸಿಲ್ಲ.ಈ ಮಧ್ಯೆ ಉದ್ಯೋಗಕ್ಕಾಗಿ ಸಾಕಷ್ಟು ಭಾರಿ ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.ಯಾವುದಕ್ಕೂ ಜಗ್ಗದ ಕಾರ್ಖಾನೆ ಮುಖ್ಯಸ್ಥರು ಸಿದ್ದರಾಜು ಮನವಿಯನ್ನ ತಿರಸ್ಕರಿಸಿದ್ದಾರೆ.ಇದರಿಂದ ಬೇಸತ್ತ ಸಿದ್ದರಾಜು ನಿನ್ನೆ ಕುಟುಂದವರೆಲ್ಲಾ ಮಹದೇಶ್ವರನ ಬೆಟ್ಟಕ್ಕೆ ತೆರಳಿದ ವೇಳೆ ಡೆತ್ ನೋಟ್ ಬರೆದು ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಡೆತ್ ನೋಟ್ ನಲ್ಲಿ ಕಂಪನಿ ನೀಡಿದ ಕಿರುಕುಳವನ್ನ ಸವಿವರವಾಗಿ ಬರೆದು ನನ್ನ ಸಾವಿಗೆ ಪ್ಲಾಂಟ್ ಹೆಡ್ ರಾಮಪ್ರಸಾದ್ ಹಾಗೂ HR ಮುಷೀದ್ ಉಲ್ಲಾ ಖಾನ್ ಎಂದು ಉಲ್ಲೇಖಿಸಿ ನೇಣಿಗೆ ಶರಣಾಗಿದ್ದಾರೆ.ಇಬ್ಬರಿಗೂ ಶಿಕ್ಷೆ ನೀಡಿ ನ್ಯಾಯ ಕೊಡಿಸಬೇಕೆಂದು ಡೆತ್ ನೋಟ್ ನಲ್ಲಿ ಮನವಿ ಮಾಡಿದ್ದಾರೆ.ಡೆತ್ ನೋಟ್ ಆಧಾರದಂತೆ ನಂಜನಗೂಡು ಗ್ರಾಮಾಂತರ ಪೊಲೀಸರು ಪ್ಲಾಂಟ್ ಹೆಡ್ ರಾಮಪ್ರಸಾದ್ ಹಾಗೂ HR ಮುಷೀದ್ ಉಲ್ಲಾ ಖಾನ್ ವಿರುದ್ದ FIR ದಾಖಲಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *