ಮತದಾನದಲ್ಲಿ ಯುವ ಮತದಾರರ ಮಹತ್ವ ಹೆಚ್ಚಿನದು -ಲಯನ್ ಸಿಆರ್ ದಿನೇಶ್ ಅಭಿಮತ


ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ರಾಜಕೀಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಚಬೇಕು. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಉತ್ತೇಜಿಸುವ ಸಲುವಾಗಿ ಶಾಲಾ ಕಾಲೇಜುಗಳಲ್ಲಿ ಮತದಾನ ಸಾಕ್ಷರತಾ ಸಂಘಗಳನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಬಹುದು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ಅಭಿಮತ ವ್ಯಕ್ತಪಡಿಸಿದರು.
ನಂಜನಗೂಡು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮತದಾನದ ಕುರಿತು ರಸಪ್ರಶ್ನೆ, ಭಿತ್ತಿಚಿತ್ರ ಹಾಗೂ ಪ್ರಬಂಧ ಸ್ಪರ್ಧೆಗಳ ಉದ್ಘಾಟನೆ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು .
ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ರಂಗಸ್ವಾಮಿ ಮಾತನಾಡಿ ದೇಶ ಸರ್ವತೋಮುಖ ಬೆಳವಣಿಗೆ ಕಾಣಬೇಕಾದರೆ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಅರ್ಹ ಆಡಳಿತಗಾರರನ್ನು ಚುನಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ವೆಂದು ಹೇಳಿದರು.
ಉಪನ್ಯಾಸಕ ಡಾ . ಕೆ.ಆರ್ .ರಾಘವೇಂದ್ರ ಮಾತನಾಡಿ ವಿದ್ಯಾರ್ಥಿಗಳು ಮತದಾನದ ಮಹತ್ವ ಮತ್ತು ಸಾರ್ವಜನಿಕರನ್ನು ಯಾವ ರೀತಿಯಲ್ಲಿ ಮತದಾನದಲ್ಲಿ ಪ್ರೇರಣೆ ಮಾಡಬೇಕು ಎಂದು ಮಾಹಿತಿಯನ್ನು ನೀಡಿದರು .
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣ ಗೌಡ, ಡಾ. ರವಿ ಟಿ. ಕೆ, ಯೋಗೀಶ್ ಹೆಚ್ ಎನ್, ಪ್ರಶಾಂತ್ ಕುಮಾರ್ ಕೆ ಎಸ್, ರಾಜೇಶ್ವರಿ, ಭವ್ಯ ಬಾಲಸುಬ್ರಹ್ಮಣ್ಯಂ, ಸಾಯಿರ ಬಾನು ಉಪಸ್ಥಿತರಿದ್ದರು.
ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಹೆಚ್ .ಕೆ. ಸ್ವಾಮಿ ಗೌಡ ಕಾರ್ಯಕ್ರಮ ನಿರೂಪಿಸಿದರು. ತಾಲ್ಲೂಕಿನ ವಿವಿಧ ಕಾಲೇಜಿನ ೬೦ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *