ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ…ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್…ಎಸ್ಪಿ ಸೀಮಾ ಲಾಟ್ಕರ್ ಆದೇಶ…

ನಂಜನಗೂಡು,ನ21,Tv10 ಕನ್ನಡ

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ.ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್ ಹಾಗೂ ಪೇದೆ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
ಗಲಾಟೆ ವಿಚಾರದಲ್ಲಿ ನವೆಂಬರ್ 12 ರಂದು ಬಿಳಿಗೆರೆ ಠಾಣೆಯ ಪಿಎಸ್ಸೈ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿದ್ದಾರೆ.ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಸೈ ರವರು ತೆರಳುವ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ರವರದ್ದಾಗಿರುತ್ತದೆ.ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.ಆಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ.ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದಾನೆ.ಕರ್ತವ್ಯಲೋಪ ಹಿನ್ನಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *