ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ…ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್…ಎಸ್ಪಿ ಸೀಮಾ ಲಾಟ್ಕರ್ ಆದೇಶ…

ನಂಜನಗೂಡು,ನ21,Tv10 ಕನ್ನಡ

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ.ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್ ಹಾಗೂ ಪೇದೆ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
ಗಲಾಟೆ ವಿಚಾರದಲ್ಲಿ ನವೆಂಬರ್ 12 ರಂದು ಬಿಳಿಗೆರೆ ಠಾಣೆಯ ಪಿಎಸ್ಸೈ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿದ್ದಾರೆ.ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಸೈ ರವರು ತೆರಳುವ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ರವರದ್ದಾಗಿರುತ್ತದೆ.ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.ಆಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ.ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದಾನೆ.ಕರ್ತವ್ಯಲೋಪ ಹಿನ್ನಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *