ನೈತಿಕ ಶಿಕ್ಷಣ ಇಂದಿನ ಯುವಜನರಿಗೆ ತೀರಾ ಅಗತ್ಯವಿದೆ -ರಾಮ್ ಪ್ರಸಾದ್


ಇಂದಿನ ಮುಂದುವರೆದ ಸಾಮಾಜಿಕ ವ್ಯವಸ್ಥೆಯಲ್ಲಿ ನೈತಿಕ ಶಿಕ್ಷಣದ ಮಹತ್ವ ಕಡಿಮೆಯಾಗುತ್ತಿದೆ. ಹಾಗಾಗಿ ರಾಮಕೃಷ್ಣ ಆಶ್ರಮದ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಜ್ಞಾನವಿಕಾಸಕ್ಕೆ ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ನೈತಿಕ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ನಂಜನಗೂಡಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀರಾಮ್ ಪ್ರಸಾದ್ ರವರು ಅಭಿಪ್ರಾಯ ಪಟ್ಟರು .
ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ಅವರು ರಾಮಕೃಷ್ಣ ಆಶ್ರಯದ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿವೇಕಾನಂದರ ಛಾಯಾಚಿತ್ರದ ಫಲಕವನ್ನು ಸ್ವೀಕರಿಸಿ ವಿದ್ಯಾರ್ಥಿಗಳಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಪರೀಕ್ಷೆಗಳು ತೀರಾ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ಇಂತಹ ಸಂಘಟನೆಗಳ ಜೊತೆಗೆ ಕೈಜೋಡಿಸಿದರೆ ಶಾಲಾ ಕಾಲೇಜುಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿಮಿಸಲು ಸಾಧ್ಯ ಎಂದು ಹೇಳಿದರು.
ಮೈಸೂರಿನ ರಾಮಕೃಷ್ಣ ಆಶ್ರಮದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಂಜನಗೂಡಿನ ತಾಲೂಕಿನ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಿದ್ದು ತಾಲೂಕಿನ 14 ಶಾಲೆಗಳಿಂದ ಇಂದು 270 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿ 9ನೇ ತರಗತಿಯಲ್ಲಿ ೧.ಸೃಜನ್ ಕಾಮಣ್ಣನವರ್ ೨.ಗೌತಮಿ ಎಂ ಸಿ ೩.ಸೃಜನ್ ಎಚ್ ಬಿ ಎಲ್ಲರೂ ಸರ್ಕಾರಿ ಆದರ್ಶ ವಿದ್ಯಾಲಯ ದೇಬೂರು ಮೊದಲ ಮೂರು ಬಹುಮಾನಗಳನ್ನು ಪಡೆದರು.10ನೇ ತರಗತಿಯ ವಿಭಾಗದಲ್ಲಿ ೧.ಸುಶ್ರುತ ಕಶ್ಯಪ್.ಜೆ ಸಿಟಿಜನ್ ಪ್ರೌಢಶಾಲೆ ೨. ಬಾಂಧವ್ಯ ಹೆಚ್ಎಮ್ ಸರ್ಕಾರಿ ಆದರ್ಶ ವಿದ್ಯಾಲಯ ೩.ಈಶ್ವರ ಸಿಂಗ್ ಶ್ರೀ ನೀಲಕಂಠ ಪ್ರೌಢಶಾಲೆ ಮೊದಲ ಮೂರು ಬಹುಮಾನಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಅಶ್ವಥನಾರಾಯಣಗೌಡ, ಉಪ ಪ್ರಾಂಶುಪಾಲರಾದ ಬಾಲ ಸರಸ್ವತಿ ಪರೀಕ್ಷೆಯ ಆಯೋಜಕರಾದ ಆನಂದ್ ರಾಜ್ , ಬಾಬು ಲಾಲ್ ಬಿ ,ಶ್ರೀನಿಧಿ ಇದ್ದರು.

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *