ನೈತಿಕ ಶಿಕ್ಷಣ ಇಂದಿನ ಯುವಜನರಿಗೆ ತೀರಾ ಅಗತ್ಯವಿದೆ -ರಾಮ್ ಪ್ರಸಾದ್


ಇಂದಿನ ಮುಂದುವರೆದ ಸಾಮಾಜಿಕ ವ್ಯವಸ್ಥೆಯಲ್ಲಿ ನೈತಿಕ ಶಿಕ್ಷಣದ ಮಹತ್ವ ಕಡಿಮೆಯಾಗುತ್ತಿದೆ. ಹಾಗಾಗಿ ರಾಮಕೃಷ್ಣ ಆಶ್ರಮದ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಜ್ಞಾನವಿಕಾಸಕ್ಕೆ ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ನೈತಿಕ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ನಂಜನಗೂಡಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀರಾಮ್ ಪ್ರಸಾದ್ ರವರು ಅಭಿಪ್ರಾಯ ಪಟ್ಟರು .
ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ಅವರು ರಾಮಕೃಷ್ಣ ಆಶ್ರಯದ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿವೇಕಾನಂದರ ಛಾಯಾಚಿತ್ರದ ಫಲಕವನ್ನು ಸ್ವೀಕರಿಸಿ ವಿದ್ಯಾರ್ಥಿಗಳಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಪರೀಕ್ಷೆಗಳು ತೀರಾ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ಇಂತಹ ಸಂಘಟನೆಗಳ ಜೊತೆಗೆ ಕೈಜೋಡಿಸಿದರೆ ಶಾಲಾ ಕಾಲೇಜುಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿಮಿಸಲು ಸಾಧ್ಯ ಎಂದು ಹೇಳಿದರು.
ಮೈಸೂರಿನ ರಾಮಕೃಷ್ಣ ಆಶ್ರಮದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಂಜನಗೂಡಿನ ತಾಲೂಕಿನ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಿದ್ದು ತಾಲೂಕಿನ 14 ಶಾಲೆಗಳಿಂದ ಇಂದು 270 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿ 9ನೇ ತರಗತಿಯಲ್ಲಿ ೧.ಸೃಜನ್ ಕಾಮಣ್ಣನವರ್ ೨.ಗೌತಮಿ ಎಂ ಸಿ ೩.ಸೃಜನ್ ಎಚ್ ಬಿ ಎಲ್ಲರೂ ಸರ್ಕಾರಿ ಆದರ್ಶ ವಿದ್ಯಾಲಯ ದೇಬೂರು ಮೊದಲ ಮೂರು ಬಹುಮಾನಗಳನ್ನು ಪಡೆದರು.10ನೇ ತರಗತಿಯ ವಿಭಾಗದಲ್ಲಿ ೧.ಸುಶ್ರುತ ಕಶ್ಯಪ್.ಜೆ ಸಿಟಿಜನ್ ಪ್ರೌಢಶಾಲೆ ೨. ಬಾಂಧವ್ಯ ಹೆಚ್ಎಮ್ ಸರ್ಕಾರಿ ಆದರ್ಶ ವಿದ್ಯಾಲಯ ೩.ಈಶ್ವರ ಸಿಂಗ್ ಶ್ರೀ ನೀಲಕಂಠ ಪ್ರೌಢಶಾಲೆ ಮೊದಲ ಮೂರು ಬಹುಮಾನಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಅಶ್ವಥನಾರಾಯಣಗೌಡ, ಉಪ ಪ್ರಾಂಶುಪಾಲರಾದ ಬಾಲ ಸರಸ್ವತಿ ಪರೀಕ್ಷೆಯ ಆಯೋಜಕರಾದ ಆನಂದ್ ರಾಜ್ , ಬಾಬು ಲಾಲ್ ಬಿ ,ಶ್ರೀನಿಧಿ ಇದ್ದರು.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *