ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ…

ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ…

ಮೈಸೂರು,ನ26,Tv10 ಕನ್ನಡ

ಮೊಣಕಾಲು ಬದಲಿ ಕಾರ್ಯ ವಿಧಾನದ ಸೂಕ್ತ ನಿರ್ವಹಣೆ ಹಾಗೂ ಪರಿಹಾರ ಕ್ರಮಕ್ಕಾಗಿ ಆಕ್ಸಿಡೈಸ್ಟ್ ಜಿರ್ಕೋ ನಿಯಂ ಇಂಪ್ಲಾಂಟ್‌ನೊಂದಿಗೆ ವಿನ್ಯಾಸ ಗೊಳಿಸಲಾಗಿರುವ ‘ರೋಬೋಟಿಕ್ ನ್ಯಾಚುರಲ್ ನೀ ರೀಪ್ಲೇಸ್ಟೆಂಟ್ (ಎನ್‌ಕೆಆರ್ -ನೈಸರ್ಗಿಕ ಮೊಣಕಾಲು ಬದಲಿ)’ ಅತ್ಯಾಧುನಿಕ ಶಸ್ತ್ರಚಿಕಿತ್ಸೆ ತಂತ್ರಜ್ಞಾನವನ್ನು ಮೈಸೂರಿನ ಆವಂಟ್ ಬಿಕೆಜಿ ಆಸ್ಪತ್ರೆಯಲ್ಲಿ ಪರಿಚಯಿಸಲಾಗಿದೆ.ಈ ವಿಧಾನ ವನ್ನು ಜಗತ್ತಿನಾದ್ಯಂತ ಕೇವಲ ಶೇ.1ರಷ್ಟು ಶಸ್ತ್ರಚಿಕಿತ್ಸಕರು ಮಾತ್ರ ಅಭ್ಯಾಸ ಮಾಡುತ್ತಿರುವುದಾಗಿ ಆಸ್ಪತ್ರೆಯ ಮುಖ್ಯಸ್ಥರು ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂ ಗಣದಲ್ಲಿ ಶನಿವಾರ ನಡೆದ ಸಮಾರಂಭ ದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅವಾಂಟ್ ಬಿಕೆಜಿ ಆಸ್ಪತ್ರೆಯ ಅತ್ಯಾಧುನಿಕ ತಂತ್ರಜ್ಞಾನ ಸೇವೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.ಸಂಬಂಧಪಟ್ಟ ವೈದ್ಯಕೀಯ ಉಪ ಕರಣಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ, ಮಂಡ್ಯ ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ಕೆ.ಮೋಹನ್, ಅವಾಂಟ್ ಬಿಕೆಜಿ ಹಾಸ್ಪಿಟಲ್ಸ್ ವ್ಯವಸ್ಥಾಪಕ ನಿರ್ದೇ ಶಕ ಡಾ.ಟಿ.ಎನ್‌.ಬಾಲಕೃಷ್ಣಗೌಡ, ಇತರೆ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಿನೂತನ ವೈದ್ಯಕೀಯ ಸೇವೆ ಬಗ್ಗೆ ವಿವರಿಸಿದ ಡಾ.ಟಿ.ಎನ್.ಬಾಲಕೃಷ್ಣಗೌಡ (ಬಿಕೆಜಿ), ವೈದ್ಯಕೀಯ ಕ್ಷೇತ್ರದಲ್ಲಿನ ಅತ್ಯಾ ಧುನಿಕ ಆವಿಷ್ಕಾರಗಳನ್ನು ಅಳವಡಿಸಿ ಕೊಳ್ಳಲು ನಮ್ಮ ಅವಾಂಟ್ ಬಿಕೆಜಿ ಆಸ್ಪತ್ರೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರೋಬೋ ಟಿಕ್ ಎನ್‌ಕೆಆರ್ ಶಸ್ತ್ರಚಿಕಿತ್ಸಕ ಯಂತ್ರವನ್ನು ಪರಿಚಯಿಸಲಾಗಿದೆ. ಇದು ಮೊಣಕಾಲು ಗಳನ್ನು ಪ್ರಮಾಣಿತ ಪಿಲ್ಲರ್ ಆಕಾರದಲ್ಲಿ ಪುನರ್ ನಿರ್ಮಿಸುವ ಸಾಂಪ್ರದಾಯಿಕ ವಿಧಾನಕ್ಕಿಂತ ವಿಭಿನ್ನವಾಗಿದೆ. ರೋಬೋ ಟಿಕ್ ಎನ್‌ಕೆಆರ್ ಶಸ್ತ್ರಚಿಕಿತ್ಸೆ ಮೂಲಕ ರೋಗಿಗಳ ಮೊಣಕಾಲನ್ನು ನಿಖರವಾಗಿ ಮರುಸೃಷ್ಟಿಸಬಹುದು ಎಂದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *