ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ…

ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ…

ಮೈಸೂರು,ನ26,Tv10 ಕನ್ನಡ

ಮೊಣಕಾಲು ಬದಲಿ ಕಾರ್ಯ ವಿಧಾನದ ಸೂಕ್ತ ನಿರ್ವಹಣೆ ಹಾಗೂ ಪರಿಹಾರ ಕ್ರಮಕ್ಕಾಗಿ ಆಕ್ಸಿಡೈಸ್ಟ್ ಜಿರ್ಕೋ ನಿಯಂ ಇಂಪ್ಲಾಂಟ್‌ನೊಂದಿಗೆ ವಿನ್ಯಾಸ ಗೊಳಿಸಲಾಗಿರುವ ‘ರೋಬೋಟಿಕ್ ನ್ಯಾಚುರಲ್ ನೀ ರೀಪ್ಲೇಸ್ಟೆಂಟ್ (ಎನ್‌ಕೆಆರ್ -ನೈಸರ್ಗಿಕ ಮೊಣಕಾಲು ಬದಲಿ)’ ಅತ್ಯಾಧುನಿಕ ಶಸ್ತ್ರಚಿಕಿತ್ಸೆ ತಂತ್ರಜ್ಞಾನವನ್ನು ಮೈಸೂರಿನ ಆವಂಟ್ ಬಿಕೆಜಿ ಆಸ್ಪತ್ರೆಯಲ್ಲಿ ಪರಿಚಯಿಸಲಾಗಿದೆ.ಈ ವಿಧಾನ ವನ್ನು ಜಗತ್ತಿನಾದ್ಯಂತ ಕೇವಲ ಶೇ.1ರಷ್ಟು ಶಸ್ತ್ರಚಿಕಿತ್ಸಕರು ಮಾತ್ರ ಅಭ್ಯಾಸ ಮಾಡುತ್ತಿರುವುದಾಗಿ ಆಸ್ಪತ್ರೆಯ ಮುಖ್ಯಸ್ಥರು ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂ ಗಣದಲ್ಲಿ ಶನಿವಾರ ನಡೆದ ಸಮಾರಂಭ ದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅವಾಂಟ್ ಬಿಕೆಜಿ ಆಸ್ಪತ್ರೆಯ ಅತ್ಯಾಧುನಿಕ ತಂತ್ರಜ್ಞಾನ ಸೇವೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.ಸಂಬಂಧಪಟ್ಟ ವೈದ್ಯಕೀಯ ಉಪ ಕರಣಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ, ಮಂಡ್ಯ ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ಕೆ.ಮೋಹನ್, ಅವಾಂಟ್ ಬಿಕೆಜಿ ಹಾಸ್ಪಿಟಲ್ಸ್ ವ್ಯವಸ್ಥಾಪಕ ನಿರ್ದೇ ಶಕ ಡಾ.ಟಿ.ಎನ್‌.ಬಾಲಕೃಷ್ಣಗೌಡ, ಇತರೆ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಿನೂತನ ವೈದ್ಯಕೀಯ ಸೇವೆ ಬಗ್ಗೆ ವಿವರಿಸಿದ ಡಾ.ಟಿ.ಎನ್.ಬಾಲಕೃಷ್ಣಗೌಡ (ಬಿಕೆಜಿ), ವೈದ್ಯಕೀಯ ಕ್ಷೇತ್ರದಲ್ಲಿನ ಅತ್ಯಾ ಧುನಿಕ ಆವಿಷ್ಕಾರಗಳನ್ನು ಅಳವಡಿಸಿ ಕೊಳ್ಳಲು ನಮ್ಮ ಅವಾಂಟ್ ಬಿಕೆಜಿ ಆಸ್ಪತ್ರೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರೋಬೋ ಟಿಕ್ ಎನ್‌ಕೆಆರ್ ಶಸ್ತ್ರಚಿಕಿತ್ಸಕ ಯಂತ್ರವನ್ನು ಪರಿಚಯಿಸಲಾಗಿದೆ. ಇದು ಮೊಣಕಾಲು ಗಳನ್ನು ಪ್ರಮಾಣಿತ ಪಿಲ್ಲರ್ ಆಕಾರದಲ್ಲಿ ಪುನರ್ ನಿರ್ಮಿಸುವ ಸಾಂಪ್ರದಾಯಿಕ ವಿಧಾನಕ್ಕಿಂತ ವಿಭಿನ್ನವಾಗಿದೆ. ರೋಬೋ ಟಿಕ್ ಎನ್‌ಕೆಆರ್ ಶಸ್ತ್ರಚಿಕಿತ್ಸೆ ಮೂಲಕ ರೋಗಿಗಳ ಮೊಣಕಾಲನ್ನು ನಿಖರವಾಗಿ ಮರುಸೃಷ್ಟಿಸಬಹುದು ಎಂದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *