ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…
- TV10 Kannada Exclusive
- November 28, 2023
- No Comment
- 325
ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…
ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದು
ಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ.ಇಬ್ಬರು ದನಗಾಹಿಗಳನ್ನ ಕೊಂದು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆ ಸೆರೆಹಿಡಿದಿದ್ದಾರೆ.
ಸುಮಾರು ಹತ್ತು ವರ್ಷ ವಯಸ್ಸಿನ ಗಂಡು ಹುಲಿ.ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಎಂಬ ದನಗಾಯಿ ಮಹಿಳೆಯನ್ನು ಬಲಿ ಪಡೆದಿತ್ತು.ಮಹದೇವನಗರದಲ್ಲಿ ಓರ್ವ ದನಗಾಹಿಯನ್ನ ಕೊಂದಿತ್ತು.ಹೆಡಿಯಾಲ ಮತ್ತು ಸುತ್ತಮುತ್ತಲು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಬಳ್ಳೂರು ಹುಂಡಿ ಗ್ರಾಮದ ಕಲ್ಲಹಾರ ಖಂಡಿ ಎಂಬ ಸ್ಥಳದಲ್ಲಿ ಹುಲಿ ಸೆರೆಯಾಗಿದೆ.
ಸೆರೆಸಿಕ್ಕ ಹುಲಿಯನ್ನ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಹುಲಿಗಳ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ.
ವೈದ್ಯಾಧಿಕಾರಿ ವಾಸಿಮ್ ನರಭಕ್ಷಕ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ರಮೇಶ್ ಕುಮಾರ್ ಹಾಗೂ ಹೆಡಿಯಾಲ ಎಸಿ ಎಫ್ ಪರಮೇಶ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚುಮಂದಿ ಕಾರ್ಯಾಚರಣೆ ನಡೆಸಿದ್ದರು.ಹಲವು ಸಿಸಿ ಕ್ಯಾಮರಾಗಳನ್ನ ಬಳಕೆ ಮಾಡಲಾಗಿತ್ತು.ಸಿಸಿ ಕ್ಯಾಮರಾದಲ್ಲಿ ಎರಡು ಹುಲಿಗಳು ಪತ್ತೆಯಾಗಿತ್ತು.ಸಧ್ಯ ಒಂದು ಹುಲಿ ಸೆರೆಯಾಗಿದೆ…