ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದು
ಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ.ಇಬ್ಬರು ದನಗಾಹಿಗಳನ್ನ ಕೊಂದು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆ ಸೆರೆಹಿಡಿದಿದ್ದಾರೆ.
ಸುಮಾರು ಹತ್ತು ವರ್ಷ ವಯಸ್ಸಿನ ಗಂಡು ಹುಲಿ.ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಎಂಬ ದನಗಾಯಿ ಮಹಿಳೆಯನ್ನು ಬಲಿ ಪಡೆದಿತ್ತು.ಮಹದೇವನಗರದಲ್ಲಿ ಓರ್ವ ದನಗಾಹಿಯನ್ನ ಕೊಂದಿತ್ತು.ಹೆಡಿಯಾಲ ಮತ್ತು ಸುತ್ತಮುತ್ತಲು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಬಳ್ಳೂರು ಹುಂಡಿ ಗ್ರಾಮದ ಕಲ್ಲಹಾರ ಖಂಡಿ ಎಂಬ ಸ್ಥಳದಲ್ಲಿ ಹುಲಿ ಸೆರೆಯಾಗಿದೆ.
ಸೆರೆಸಿಕ್ಕ ಹುಲಿಯನ್ನ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಹುಲಿಗಳ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ.
ವೈದ್ಯಾಧಿಕಾರಿ ವಾಸಿಮ್ ನರಭಕ್ಷಕ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ರಮೇಶ್ ಕುಮಾರ್ ಹಾಗೂ ಹೆಡಿಯಾಲ ಎಸಿ ಎಫ್ ಪರಮೇಶ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚುಮಂದಿ ಕಾರ್ಯಾಚರಣೆ ನಡೆಸಿದ್ದರು.ಹಲವು ಸಿಸಿ ಕ್ಯಾಮರಾಗಳನ್ನ ಬಳಕೆ ಮಾಡಲಾಗಿತ್ತು.ಸಿಸಿ ಕ್ಯಾಮರಾದಲ್ಲಿ ಎರಡು ಹುಲಿಗಳು ಪತ್ತೆಯಾಗಿತ್ತು.ಸಧ್ಯ ಒಂದು ಹುಲಿ ಸೆರೆಯಾಗಿದೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *