ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *