ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *