ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

  • Crime
  • December 2, 2023
  • No Comment
  • 371

ಬೆಂಗಳೂರು,ಡಿ2,Tv10 ಕನ್ನಡ

ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಭಯಾನಕ ಸತ್ಯವನ್ನು ಪೊಲೀಸರಿಗೆ ತಿಳಿಸಿದ್ದಾಳೆ.

ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ವೇಳೆ ಕೃತ್ಯವೆಸಗಿರುವುದನ್ನ ತಿಳಿಸಿದ್ದಾಳೆ.ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ ಎಂಬ‌ ಭಯಾನಕ ಮಾಹಿತಿ ನೀಡಿದ್ದಾಳೆ.12 ವಾರ ಕಳೆದ ಮಕ್ಕಳನ್ನು ಅಬಾರ್ಷನ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ನಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂದು ‌ತಿಳಿಸಿದ್ದಾಳೆ.ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದ, ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ನದಿಗೆ ಬಿಸಾಕುವ ಕೆಲಸ ಮಾಡುತ್ತಿದ್ದ. 6 ತಿಂಗಳ ಮಗು ಅಬಾರ್ಷನ್ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂದು ನರ್ಸ್ ‌ಮಂಜುಳ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆಂದು ಹೇಳಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *