ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

  • Crime
  • December 2, 2023
  • No Comment
  • 328

ಬೆಂಗಳೂರು,ಡಿ2,Tv10 ಕನ್ನಡ

ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಭಯಾನಕ ಸತ್ಯವನ್ನು ಪೊಲೀಸರಿಗೆ ತಿಳಿಸಿದ್ದಾಳೆ.

ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ವೇಳೆ ಕೃತ್ಯವೆಸಗಿರುವುದನ್ನ ತಿಳಿಸಿದ್ದಾಳೆ.ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ ಎಂಬ‌ ಭಯಾನಕ ಮಾಹಿತಿ ನೀಡಿದ್ದಾಳೆ.12 ವಾರ ಕಳೆದ ಮಕ್ಕಳನ್ನು ಅಬಾರ್ಷನ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ನಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂದು ‌ತಿಳಿಸಿದ್ದಾಳೆ.ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದ, ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ನದಿಗೆ ಬಿಸಾಕುವ ಕೆಲಸ ಮಾಡುತ್ತಿದ್ದ. 6 ತಿಂಗಳ ಮಗು ಅಬಾರ್ಷನ್ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂದು ನರ್ಸ್ ‌ಮಂಜುಳ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆಂದು ಹೇಳಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *