ಎಂಜಿ ರಸ್ತೆ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಿಗೆ…ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ಮಹತ್ತರ ತೀರ್ಪು…ತರಕಾರಿ ಮಾರಾಟಗಾರರು ಅತಂತ್ರ…

ಮೈಸೂರು,ಡಿ8,Tv10 ಕನ್ನಡ

ಮೈಸೂರಿನ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಾಗಿದೆ.ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ನ್ಯಾಯಾಧೀಶರಾದ ಸಂಗ್ರೇಶಿ ರವರು ಮಹತ್ತರ ತೀರ್ಪು ನೀಡಿದ್ದಾರೆ.ಈ ಮೂಲಕ ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.

ತರಕಾರಿ ಮಾರುಕಟ್ಟೆ ಪ್ರದೇಶ ವಿಸ್ತೀರ್ಣ ಸುಮಾರು ಎರಡು ಎಕರೆ ಜಾಗವನ್ನ ವಸ್ತುಪ್ರದರ್ಶನ ಪ್ರಾಧಿಕಾರ ನಮಗೆ ಸೇರಿದ್ದು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.ಆದರೆ ರಾಜವಂಶಸ್ಥರ ತೆರಿಗೆ ಬಾಕಿ ವಸೂಲಾತಿಗಾಗಿ ಸದರಿ ಎರಡು ಎಕರೆ ಪ್ರದೇಶವನ್ನ ಹರಾಜು ಹಾಕಿದ್ದು ಬೆಂಗಳೂರು ಮೂಲದ ವಿಜಯ್ ಕುಮಾರ್ ಎಂಬುವರು ಖರೀದಿಸಿದ್ದರು.ರಾಜವಂಶಸ್ಥರಿಗೆ ಸೇರಿದ ಗರಿಕೆ ಮಾಳದ ಸುಮಾರು 145 ಎಕ್ರೆ ಪೈಕಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ರವರು 80 ಎಕ್ರೆ ಜಾಗವನ್ನ ಸ್ವಾಧೀನಪಡಿಸಿಕೊಂಡು ವಸ್ತುಪ್ರದರ್ಶನಕ್ಕಾಗಿ ನೀಡಿದ್ದರು.ಈ ಹಿನ್ನಲೆ ವಸ್ತುಪ್ರದರ್ಶನ ಪ್ರಾಧಿಕಾರ ಎಂಜಿ ಮಾರುಕಟ್ಟೆ ಜಾಗವೂ ಸಹ ನಮಗೆ ಸೇರಿದ್ದೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.ಇದೀಗ ನ್ಯಾಯಾಲಯ ತೀರ್ಪು ನೀಡಿದ್ದು ಸದರಿ ಜಾಗ ವಿಜಯ್ ಕುಮಾರ್ ಗೆ ಸೇರಿದ್ದಾಗಿ ತಿಳಿಸಿದೆ.ವಿಜಯ್ ಕುಮಾರ್ ಪರ ಹಿರಿಯ ವಕೀಲರಾದ ಪಿ.ಶ್ಯಾಂಭಟ್ ವಾದ ಮಂಡಿಸಿದ್ದರು.ಸಧ್ಯ ಈ ತೀರ್ಪಿನಿಂದ ನೂರಾರು ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.ವ್ಯಾಪಾರ ವಹಿವಾಟನ್ನ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಬಂದಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *