ಎಂಜಿ ರಸ್ತೆ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಿಗೆ…ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ಮಹತ್ತರ ತೀರ್ಪು…ತರಕಾರಿ ಮಾರಾಟಗಾರರು ಅತಂತ್ರ…

ಮೈಸೂರು,ಡಿ8,Tv10 ಕನ್ನಡ

ಮೈಸೂರಿನ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಾಗಿದೆ.ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ನ್ಯಾಯಾಧೀಶರಾದ ಸಂಗ್ರೇಶಿ ರವರು ಮಹತ್ತರ ತೀರ್ಪು ನೀಡಿದ್ದಾರೆ.ಈ ಮೂಲಕ ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.

ತರಕಾರಿ ಮಾರುಕಟ್ಟೆ ಪ್ರದೇಶ ವಿಸ್ತೀರ್ಣ ಸುಮಾರು ಎರಡು ಎಕರೆ ಜಾಗವನ್ನ ವಸ್ತುಪ್ರದರ್ಶನ ಪ್ರಾಧಿಕಾರ ನಮಗೆ ಸೇರಿದ್ದು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.ಆದರೆ ರಾಜವಂಶಸ್ಥರ ತೆರಿಗೆ ಬಾಕಿ ವಸೂಲಾತಿಗಾಗಿ ಸದರಿ ಎರಡು ಎಕರೆ ಪ್ರದೇಶವನ್ನ ಹರಾಜು ಹಾಕಿದ್ದು ಬೆಂಗಳೂರು ಮೂಲದ ವಿಜಯ್ ಕುಮಾರ್ ಎಂಬುವರು ಖರೀದಿಸಿದ್ದರು.ರಾಜವಂಶಸ್ಥರಿಗೆ ಸೇರಿದ ಗರಿಕೆ ಮಾಳದ ಸುಮಾರು 145 ಎಕ್ರೆ ಪೈಕಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ರವರು 80 ಎಕ್ರೆ ಜಾಗವನ್ನ ಸ್ವಾಧೀನಪಡಿಸಿಕೊಂಡು ವಸ್ತುಪ್ರದರ್ಶನಕ್ಕಾಗಿ ನೀಡಿದ್ದರು.ಈ ಹಿನ್ನಲೆ ವಸ್ತುಪ್ರದರ್ಶನ ಪ್ರಾಧಿಕಾರ ಎಂಜಿ ಮಾರುಕಟ್ಟೆ ಜಾಗವೂ ಸಹ ನಮಗೆ ಸೇರಿದ್ದೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.ಇದೀಗ ನ್ಯಾಯಾಲಯ ತೀರ್ಪು ನೀಡಿದ್ದು ಸದರಿ ಜಾಗ ವಿಜಯ್ ಕುಮಾರ್ ಗೆ ಸೇರಿದ್ದಾಗಿ ತಿಳಿಸಿದೆ.ವಿಜಯ್ ಕುಮಾರ್ ಪರ ಹಿರಿಯ ವಕೀಲರಾದ ಪಿ.ಶ್ಯಾಂಭಟ್ ವಾದ ಮಂಡಿಸಿದ್ದರು.ಸಧ್ಯ ಈ ತೀರ್ಪಿನಿಂದ ನೂರಾರು ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.ವ್ಯಾಪಾರ ವಹಿವಾಟನ್ನ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಬಂದಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *