ಎಂಜಿ ರಸ್ತೆ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಿಗೆ…ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ಮಹತ್ತರ ತೀರ್ಪು…ತರಕಾರಿ ಮಾರಾಟಗಾರರು ಅತಂತ್ರ…

ಮೈಸೂರು,ಡಿ8,Tv10 ಕನ್ನಡ

ಮೈಸೂರಿನ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಾಗಿದೆ.ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ನ್ಯಾಯಾಧೀಶರಾದ ಸಂಗ್ರೇಶಿ ರವರು ಮಹತ್ತರ ತೀರ್ಪು ನೀಡಿದ್ದಾರೆ.ಈ ಮೂಲಕ ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.

ತರಕಾರಿ ಮಾರುಕಟ್ಟೆ ಪ್ರದೇಶ ವಿಸ್ತೀರ್ಣ ಸುಮಾರು ಎರಡು ಎಕರೆ ಜಾಗವನ್ನ ವಸ್ತುಪ್ರದರ್ಶನ ಪ್ರಾಧಿಕಾರ ನಮಗೆ ಸೇರಿದ್ದು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.ಆದರೆ ರಾಜವಂಶಸ್ಥರ ತೆರಿಗೆ ಬಾಕಿ ವಸೂಲಾತಿಗಾಗಿ ಸದರಿ ಎರಡು ಎಕರೆ ಪ್ರದೇಶವನ್ನ ಹರಾಜು ಹಾಕಿದ್ದು ಬೆಂಗಳೂರು ಮೂಲದ ವಿಜಯ್ ಕುಮಾರ್ ಎಂಬುವರು ಖರೀದಿಸಿದ್ದರು.ರಾಜವಂಶಸ್ಥರಿಗೆ ಸೇರಿದ ಗರಿಕೆ ಮಾಳದ ಸುಮಾರು 145 ಎಕ್ರೆ ಪೈಕಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ರವರು 80 ಎಕ್ರೆ ಜಾಗವನ್ನ ಸ್ವಾಧೀನಪಡಿಸಿಕೊಂಡು ವಸ್ತುಪ್ರದರ್ಶನಕ್ಕಾಗಿ ನೀಡಿದ್ದರು.ಈ ಹಿನ್ನಲೆ ವಸ್ತುಪ್ರದರ್ಶನ ಪ್ರಾಧಿಕಾರ ಎಂಜಿ ಮಾರುಕಟ್ಟೆ ಜಾಗವೂ ಸಹ ನಮಗೆ ಸೇರಿದ್ದೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.ಇದೀಗ ನ್ಯಾಯಾಲಯ ತೀರ್ಪು ನೀಡಿದ್ದು ಸದರಿ ಜಾಗ ವಿಜಯ್ ಕುಮಾರ್ ಗೆ ಸೇರಿದ್ದಾಗಿ ತಿಳಿಸಿದೆ.ವಿಜಯ್ ಕುಮಾರ್ ಪರ ಹಿರಿಯ ವಕೀಲರಾದ ಪಿ.ಶ್ಯಾಂಭಟ್ ವಾದ ಮಂಡಿಸಿದ್ದರು.ಸಧ್ಯ ಈ ತೀರ್ಪಿನಿಂದ ನೂರಾರು ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.ವ್ಯಾಪಾರ ವಹಿವಾಟನ್ನ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಬಂದಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *