ಎಂಜಿ ರಸ್ತೆ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಿಗೆ…ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ಮಹತ್ತರ ತೀರ್ಪು…ತರಕಾರಿ ಮಾರಾಟಗಾರರು ಅತಂತ್ರ…

ಮೈಸೂರು,ಡಿ8,Tv10 ಕನ್ನಡ

ಮೈಸೂರಿನ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಾಗಿದೆ.ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ನ್ಯಾಯಾಧೀಶರಾದ ಸಂಗ್ರೇಶಿ ರವರು ಮಹತ್ತರ ತೀರ್ಪು ನೀಡಿದ್ದಾರೆ.ಈ ಮೂಲಕ ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.

ತರಕಾರಿ ಮಾರುಕಟ್ಟೆ ಪ್ರದೇಶ ವಿಸ್ತೀರ್ಣ ಸುಮಾರು ಎರಡು ಎಕರೆ ಜಾಗವನ್ನ ವಸ್ತುಪ್ರದರ್ಶನ ಪ್ರಾಧಿಕಾರ ನಮಗೆ ಸೇರಿದ್ದು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.ಆದರೆ ರಾಜವಂಶಸ್ಥರ ತೆರಿಗೆ ಬಾಕಿ ವಸೂಲಾತಿಗಾಗಿ ಸದರಿ ಎರಡು ಎಕರೆ ಪ್ರದೇಶವನ್ನ ಹರಾಜು ಹಾಕಿದ್ದು ಬೆಂಗಳೂರು ಮೂಲದ ವಿಜಯ್ ಕುಮಾರ್ ಎಂಬುವರು ಖರೀದಿಸಿದ್ದರು.ರಾಜವಂಶಸ್ಥರಿಗೆ ಸೇರಿದ ಗರಿಕೆ ಮಾಳದ ಸುಮಾರು 145 ಎಕ್ರೆ ಪೈಕಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ರವರು 80 ಎಕ್ರೆ ಜಾಗವನ್ನ ಸ್ವಾಧೀನಪಡಿಸಿಕೊಂಡು ವಸ್ತುಪ್ರದರ್ಶನಕ್ಕಾಗಿ ನೀಡಿದ್ದರು.ಈ ಹಿನ್ನಲೆ ವಸ್ತುಪ್ರದರ್ಶನ ಪ್ರಾಧಿಕಾರ ಎಂಜಿ ಮಾರುಕಟ್ಟೆ ಜಾಗವೂ ಸಹ ನಮಗೆ ಸೇರಿದ್ದೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.ಇದೀಗ ನ್ಯಾಯಾಲಯ ತೀರ್ಪು ನೀಡಿದ್ದು ಸದರಿ ಜಾಗ ವಿಜಯ್ ಕುಮಾರ್ ಗೆ ಸೇರಿದ್ದಾಗಿ ತಿಳಿಸಿದೆ.ವಿಜಯ್ ಕುಮಾರ್ ಪರ ಹಿರಿಯ ವಕೀಲರಾದ ಪಿ.ಶ್ಯಾಂಭಟ್ ವಾದ ಮಂಡಿಸಿದ್ದರು.ಸಧ್ಯ ಈ ತೀರ್ಪಿನಿಂದ ನೂರಾರು ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.ವ್ಯಾಪಾರ ವಹಿವಾಟನ್ನ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಬಂದಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *