ಎಂಜಿ ರಸ್ತೆ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಿಗೆ…ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ಮಹತ್ತರ ತೀರ್ಪು…ತರಕಾರಿ ಮಾರಾಟಗಾರರು ಅತಂತ್ರ…

ಮೈಸೂರು,ಡಿ8,Tv10 ಕನ್ನಡ

ಮೈಸೂರಿನ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಾಗಿದೆ.ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ನ್ಯಾಯಾಧೀಶರಾದ ಸಂಗ್ರೇಶಿ ರವರು ಮಹತ್ತರ ತೀರ್ಪು ನೀಡಿದ್ದಾರೆ.ಈ ಮೂಲಕ ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.

ತರಕಾರಿ ಮಾರುಕಟ್ಟೆ ಪ್ರದೇಶ ವಿಸ್ತೀರ್ಣ ಸುಮಾರು ಎರಡು ಎಕರೆ ಜಾಗವನ್ನ ವಸ್ತುಪ್ರದರ್ಶನ ಪ್ರಾಧಿಕಾರ ನಮಗೆ ಸೇರಿದ್ದು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.ಆದರೆ ರಾಜವಂಶಸ್ಥರ ತೆರಿಗೆ ಬಾಕಿ ವಸೂಲಾತಿಗಾಗಿ ಸದರಿ ಎರಡು ಎಕರೆ ಪ್ರದೇಶವನ್ನ ಹರಾಜು ಹಾಕಿದ್ದು ಬೆಂಗಳೂರು ಮೂಲದ ವಿಜಯ್ ಕುಮಾರ್ ಎಂಬುವರು ಖರೀದಿಸಿದ್ದರು.ರಾಜವಂಶಸ್ಥರಿಗೆ ಸೇರಿದ ಗರಿಕೆ ಮಾಳದ ಸುಮಾರು 145 ಎಕ್ರೆ ಪೈಕಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ರವರು 80 ಎಕ್ರೆ ಜಾಗವನ್ನ ಸ್ವಾಧೀನಪಡಿಸಿಕೊಂಡು ವಸ್ತುಪ್ರದರ್ಶನಕ್ಕಾಗಿ ನೀಡಿದ್ದರು.ಈ ಹಿನ್ನಲೆ ವಸ್ತುಪ್ರದರ್ಶನ ಪ್ರಾಧಿಕಾರ ಎಂಜಿ ಮಾರುಕಟ್ಟೆ ಜಾಗವೂ ಸಹ ನಮಗೆ ಸೇರಿದ್ದೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.ಇದೀಗ ನ್ಯಾಯಾಲಯ ತೀರ್ಪು ನೀಡಿದ್ದು ಸದರಿ ಜಾಗ ವಿಜಯ್ ಕುಮಾರ್ ಗೆ ಸೇರಿದ್ದಾಗಿ ತಿಳಿಸಿದೆ.ವಿಜಯ್ ಕುಮಾರ್ ಪರ ಹಿರಿಯ ವಕೀಲರಾದ ಪಿ.ಶ್ಯಾಂಭಟ್ ವಾದ ಮಂಡಿಸಿದ್ದರು.ಸಧ್ಯ ಈ ತೀರ್ಪಿನಿಂದ ನೂರಾರು ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.ವ್ಯಾಪಾರ ವಹಿವಾಟನ್ನ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಬಂದಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *