ಮುಸ್ಲಿಂ ಸಮುದಾಯದ ಪರ ಸಿಎಂ ಸಿದ್ದು ಭರ್ಜರಿ ಬ್ಯಾಟಿಂಗ್ ಆರೋಪ…ಹಿಂದು ಸಂಘಟನೆಗಳಿಂದ ಕ್ರಮ ಕೈಗೊಳ್ಳುವಂತೆ ಮನವಿ…

ಮೈಸೂರು,ಡಿ8,Tv10 ಕನ್ನಡ

ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯಕ್ಕೆ ಹತ್ತು ಸಾವಿರ ಕೋಟಿ ರೂ ಕೊಡುವುದಾಗಿ ನೀಡಿರುವ ಹೇಳಿಕೆಯನ್ನ ವಿರೋಧಿಸಿ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಿಂದೂ ಪರ ಸಂಘಟನೆಯ ಮುಖಂಡರು ದೂರು ನೀಡಿದ್ದಾರೆ.ಹುಬ್ಬಳ್ಳಿ ಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಂಕಿತ ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ಕ್ರಮಕೈಗೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದ್ದಾರೆ. ಈಗಾಗಲೇ ನಾಲ್ಕು ಸಾವಿರ ಕೋಟಿ ಅನುದಾನ ನೀಡಿದ್ದು, ಮುಂದಿನ ವರ್ಷ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಹೇಳಿದ್ದಾರೆ.ಈ ಹೇಳಿಕೆಯು ಸಂವಿಧಾನ ವಿರೋಧಿಯಾಗಿದೆ.
ಮುಸ್ಲಿಮರಿಗೆ ಪ್ರತ್ಯೇಕ ಅನುದಾನ ಕೊಡಲು ನಮ್ಮ ಸಂವಿಧಾನದಲ್ಲಿ ಅವಕಾಶವಿರುವುದಿಲ್ಲ ಎಂದು ಮುಖಂಡರು ದೂರಿದ್ದಾರೆ.
ರಾಜ್ಯದ ಖಜಾನೆಯ ಹಣವನ್ನು ಅಗಾಧ ಪ್ರಮಾಣದಲ್ಲಿ ಖರ್ಚು ಮಾಡುತ್ತಿರುವುದನ್ನು ರಾಜ್ಯಪಾಲರ ಗಮನಕ್ಕೆ ತರುತ್ತಿದ್ದೇವೆ.ಇದು ಸಂವಿಧಾನ ವಿರೋದಿಯಾಗಿರುವುದರಿಂದ ತಕ್ಷಣ ಸಿದ್ದರಾಮಯ್ಯ ಸರಕಾರವನ್ನು ವಜಾಗೊಳಿಸಬೇಕೆಂದು ಹಿಂದೂಪರ ಸಂಘಟನೆ ಆಗ್ರಹಿಸಿದೆ. ಸಮಾವೇಶದಲ್ಲಿ ಸಿದ್ದರಾಮಯ್ಯನವರ ಜೊತೆ ವೇದಿಕೆ ಹಂಚಿಕೊಂಡ ತನ್ವೀರ್ ಪೀರಾ ಎಂಬ ಮುಸ್ಲಿಂ ಮೌಲ್ವಿಗೆ ಶಂಕಿತ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಇದೆ ಎಂದು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದ್ದಾರೆ.
ಈ ವ್ಯಕ್ತಿಯು ಭಾರತದ ಚಟುವಟಿಕೆಗಳನ್ನು ಅರಬ್ ದೇಶಗಳಿಗೆ ರವಾನಿಸುವ ದೇಶದ್ರೋಹಿ ಕೆಲಸದ ಬಗ್ಗೆ ಟ್ವಿಟ್ಟರ್ ನಲ್ಲಿ ಯತ್ನಾಳ್ ತಿಳಿಸಿದ್ದಾರೆ. ಹಾಗಾಗಿ ಇದು ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದು, ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಲು ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸಲ್ಲಿಸುವ ವೇಳೆ ಹಿಂದೂಪರ ಸಂಘಟನೆಯ ಮುಖಂಡರಾದ
ಮಹಾಬಲೇಶ್ವರ ಕ್ಷೇತ್ರೀಯ ಸತ್ಸಂಗ ಪ್ರಮುಖ, ಸವಿತಾ ಘಾಟ್ಕೆ ವಿಭಾಗ ಸಂಯೋಜಕಿ,ಮಧುಶಂಕರ್ ಕಾರ್ಯದರ್ಶಿ ವಿ.ಹೆಚ್.ಪಿ,ಮರಿಯಪ್ಪ,
ಡಾ: ಎ. ಎಫ್ ಕೃಷ್ಣಮೂರ್ತಿ ಕೋಶಾಧ್ಯಕ್ಷರು,
ಲೋಕೇಶ್ ಹಾಜರಿದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *