ಮುಸ್ಲಿಂ ಸಮುದಾಯದ ಪರ ಸಿಎಂ ಸಿದ್ದು ಭರ್ಜರಿ ಬ್ಯಾಟಿಂಗ್ ಆರೋಪ…ಹಿಂದು ಸಂಘಟನೆಗಳಿಂದ ಕ್ರಮ ಕೈಗೊಳ್ಳುವಂತೆ ಮನವಿ…

ಮೈಸೂರು,ಡಿ8,Tv10 ಕನ್ನಡ

ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯಕ್ಕೆ ಹತ್ತು ಸಾವಿರ ಕೋಟಿ ರೂ ಕೊಡುವುದಾಗಿ ನೀಡಿರುವ ಹೇಳಿಕೆಯನ್ನ ವಿರೋಧಿಸಿ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಿಂದೂ ಪರ ಸಂಘಟನೆಯ ಮುಖಂಡರು ದೂರು ನೀಡಿದ್ದಾರೆ.ಹುಬ್ಬಳ್ಳಿ ಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಂಕಿತ ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ಕ್ರಮಕೈಗೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದ್ದಾರೆ. ಈಗಾಗಲೇ ನಾಲ್ಕು ಸಾವಿರ ಕೋಟಿ ಅನುದಾನ ನೀಡಿದ್ದು, ಮುಂದಿನ ವರ್ಷ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಹೇಳಿದ್ದಾರೆ.ಈ ಹೇಳಿಕೆಯು ಸಂವಿಧಾನ ವಿರೋಧಿಯಾಗಿದೆ.
ಮುಸ್ಲಿಮರಿಗೆ ಪ್ರತ್ಯೇಕ ಅನುದಾನ ಕೊಡಲು ನಮ್ಮ ಸಂವಿಧಾನದಲ್ಲಿ ಅವಕಾಶವಿರುವುದಿಲ್ಲ ಎಂದು ಮುಖಂಡರು ದೂರಿದ್ದಾರೆ.
ರಾಜ್ಯದ ಖಜಾನೆಯ ಹಣವನ್ನು ಅಗಾಧ ಪ್ರಮಾಣದಲ್ಲಿ ಖರ್ಚು ಮಾಡುತ್ತಿರುವುದನ್ನು ರಾಜ್ಯಪಾಲರ ಗಮನಕ್ಕೆ ತರುತ್ತಿದ್ದೇವೆ.ಇದು ಸಂವಿಧಾನ ವಿರೋದಿಯಾಗಿರುವುದರಿಂದ ತಕ್ಷಣ ಸಿದ್ದರಾಮಯ್ಯ ಸರಕಾರವನ್ನು ವಜಾಗೊಳಿಸಬೇಕೆಂದು ಹಿಂದೂಪರ ಸಂಘಟನೆ ಆಗ್ರಹಿಸಿದೆ. ಸಮಾವೇಶದಲ್ಲಿ ಸಿದ್ದರಾಮಯ್ಯನವರ ಜೊತೆ ವೇದಿಕೆ ಹಂಚಿಕೊಂಡ ತನ್ವೀರ್ ಪೀರಾ ಎಂಬ ಮುಸ್ಲಿಂ ಮೌಲ್ವಿಗೆ ಶಂಕಿತ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಇದೆ ಎಂದು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದ್ದಾರೆ.
ಈ ವ್ಯಕ್ತಿಯು ಭಾರತದ ಚಟುವಟಿಕೆಗಳನ್ನು ಅರಬ್ ದೇಶಗಳಿಗೆ ರವಾನಿಸುವ ದೇಶದ್ರೋಹಿ ಕೆಲಸದ ಬಗ್ಗೆ ಟ್ವಿಟ್ಟರ್ ನಲ್ಲಿ ಯತ್ನಾಳ್ ತಿಳಿಸಿದ್ದಾರೆ. ಹಾಗಾಗಿ ಇದು ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದು, ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಲು ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸಲ್ಲಿಸುವ ವೇಳೆ ಹಿಂದೂಪರ ಸಂಘಟನೆಯ ಮುಖಂಡರಾದ
ಮಹಾಬಲೇಶ್ವರ ಕ್ಷೇತ್ರೀಯ ಸತ್ಸಂಗ ಪ್ರಮುಖ, ಸವಿತಾ ಘಾಟ್ಕೆ ವಿಭಾಗ ಸಂಯೋಜಕಿ,ಮಧುಶಂಕರ್ ಕಾರ್ಯದರ್ಶಿ ವಿ.ಹೆಚ್.ಪಿ,ಮರಿಯಪ್ಪ,
ಡಾ: ಎ. ಎಫ್ ಕೃಷ್ಣಮೂರ್ತಿ ಕೋಶಾಧ್ಯಕ್ಷರು,
ಲೋಕೇಶ್ ಹಾಜರಿದ್ದರು.

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *