ಮಾಜಿ ಆದರೂ ವಿಶ್ರಾಂತಿ ಇಲ್ಲ…ಸಾಮಾಜಿಕ ಕಳಕಳಿ ಮರೆಯಲ್ಲ…ಉದ್ಯಾನವನದ ಸ್ವಚ್ಛತೆಗೆ ಇಳಿದ ಮಾಜಿ ಪುರಪಿತೃ ಮ.ವಿ.ರಾಮಪ್ರಸಾದ…

ಮೈಸೂರು,ಡಿ10,Tv10 ಕನ್ನಡ

ನವೆಂಬರ್ 16 ಕಾರ್ಪೊರೇಟರ್ ಗಳ ಅವಧಿ ಮುಗಿದಿದೆ.65 ಪಾಲಿಕೆ ಸದಸ್ಯರು ಅಧಿಕಾರ ಕಳೆದುಕೊಂಡಿದ್ದಾರೆ.ಅವಧಿ ಮುಗಿದರೂ ವಿಶ್ರಾಂತಿ ಪಡೆಯದ ವಾರ್ಡ್ 55 ರ ಮಾಜಿ ಕಾರ್ಪೊರೇಟರ್ ಸಾಮಾಜಿಕ ಕಳಕಳಿಗೆ ಆಧ್ಯತೆ ನೀಡುತ್ತಿದ್ದಾರೆ.ತಾವು ಪ್ರತಿನಿಧಿಸಿದ್ದ ವಾರ್ಡ್ ನ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನಾನುರಾಗಿಯಾಗಿ ಮುಂದುವರೆಯುತ್ತಿದ್ದಾರೆ.ರೆಸ್ಟ್ ಗೆ ಮೊರೆ ಹೋಗದ ಮ.ವಿ.ರಾಮಪ್ರಸಾದ ಅಕ್ಕಮ್ಮಣ್ಣಿ ಆಸ್ಪತ್ರೆಯ ಉದ್ಯಾನವನದ ಸ್ವಚ್ಛತೆಗೆ ಮುಂದಾಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಾಣ ಮಾಡಿದ ಪಾರ್ಕ್ ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ.ಪ್ರತಿದಿನ ನೂರಾರು ಮಂದಿ ಈ ಪಾರ್ಕ್ ನಲ್ಲಿ ವಾಯುವಿಹಾರ ಮಾಡುತ್ತಾರೆ.ಪಾರ್ಕ್ ಆವರಣದಲ್ಲಿ ಪಾರ್ಥೇನಿಯಂ ಗಿಡಗಳು ಬೆಳೆದಿವೆ.ಗಿಡಗಂಟೆಗಳು ಪಾಲಿಕೆ ಅಧಿಕಾರಿಗಳನ್ನ ಅಣಕಿಸುತ್ತಿವೆ.ನಿರ್ವಹಣೆ ಕಾಣದ ಉದ್ಯಾನವನದ ಸ್ವಚ್ಛತೆಗೆ ಸ್ಥಳೀಯರ ನೆರವಿಗೆ ಮ.ವಿ.ರಾಮಪ್ರಸಾದ ಮುಂದಾಗಿದ್ದಾರೆ.ಖುದ್ದು ಸ್ವಚ್ಛತಾ ಪರಿಕರಗಳನ್ನ ಹಿಡಿದ ಮ.ವಿ.ರಾಮಪ್ರಸಾದ್ ಗಿಡಗಂಟೆಗಳನ್ನ ತೆರುವುಗೊಳಿಸುತ್ತಿದ್ದಾರೆ.ಪಾರ್ಕ್ ನಿರ್ವಹಣೆಗೆ ಸಿಬ್ಬಂದಿಗಳನ್ನ ನೇಮಿಸುವಂತೆ ಮ.ವಿ.ರಾಮಪ್ರಸಾದ್ ಪಾಲಿಕೆ ಆಯುಕ್ತರನ್ನ ಒತ್ತಾಯಿಸಿದ್ದಾರೆ.ಅವಧಿ ಮುಗಿದರೂ ಜನರ ಸೇವೆಗೆ ಮುಂದಾಗಿರುವ ಮ.ವಿ.ರಾಮಪ್ರಸಾದ್ ಇತರ ಮಾಜಿಗಳಿಗೂ ಮಾದರಿಯಾಗಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *