ಪಾನಮತ್ತ ಯುವಕರ ಗಲಾಟೆ…ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ…!!

ಕೆ.ಆರ್.ನಗರ,ಡಿ10,Tv10 ಕನ್ನಡ

ಕುಡಿದು ಗಲಾಟೆ ಮಾಡಿದ ಯುವಕರನ್ನ ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆಯಾಗಿದೆ.
ಮೈಸೂರು ಜಿಲ್ಲೆ ಕೆ ಆರ್ ನಗರದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕೆ.ಆರ್.ನಗರ ಪೊಲೀಸ್ ಠಾಣೆ
ಪೊಲೀಸ್ ಕಾನ್ಸಟೇಬಲ್ ಪುನೀತ್ ಹಾಗೂ ಹರೀಶ್‌ಗೆ ವರ್ಗಾವಣೆ ಶಿಕ್ಷೆಯಾಗಿದೆ.
ಐದು ದಿನದ ಹಿಂದೆ ಕೆ ಆರ್ ನಗರ ಪಟ್ಟಣದಲ್ಲಿ ಗಲಾಟೆ ನಡೆದಿತ್ತು.
ಸಾರ್ವಜನಿಕ ಸ್ಥಳದಲ್ಲಿ ಕುಡಿಯುತ್ತಿದ್ದ ಯುವಕರನ್ನ ಕಾನ್ಸಟೇಬಲ್‌ಗಳಾದ ಪುನೀತ್ ಹಾಗೂ ಹರೀಶ್ ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಪೊಲೀಸರ ಜೊತೆ ಯುವಕರ ಮಾತಿನ ಚಕಮಕಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.
ಕೆ ಆರ್ ನಗರ ತಾಲ್ಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಅವರ ಪುತ್ರ ಹಾಗೂ ಸ್ನೇಹಿತರು ಗಲಾಟೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಚೀರನಹಳ್ಳಿ ಶಿವಣ್ಣ
ಮಗನಿಗೆ ಬುದ್ದಿ ಹೇಳಿ ಜಗಳ ಬಿಡಿಸಿ ಕಳುಹಿಸಿದ್ದರು.
ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇವೆ ಅಂತಾ ಧಮ್ಕಿ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ.
ಘಟನೆ ನಂತರ ವಾಪಸ್ಸಾಗಿದ್ದ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.
ಇದಾದ ಮರುದಿನ ಇಬ್ಬರು ಕಾನ್ಸಟೇಬಲ್‌ಗಳು ವರ್ಗಾವಣೆಯಾಗಿದೆ.
ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಅಂತಾ ಆದೇಶವಾಗಿದೆ.
ಹರೀಶ್‌ಗೆ ಕೆ ಆರ್ ನಗರ ಠಾಣೆಯಿಂದ ಬಿಳಿಕೆರೆ ಪೊಲೀಸ್ ಠಾಣೆಗೆ ವರ್ಗಾವಣೆ
ಪುನೀತ್‌ಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *